Connect with us

Dvgsuddi Kannada | online news portal | Kannada news online

ವಿಡಿಯೋ ಮೂಲಕ ಕೊರೊನಾ ವೈರಸ್ ಜಾಗೃತಿ  ಮೂಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಪ್ರಮುಖ ಸುದ್ದಿ

ವಿಡಿಯೋ ಮೂಲಕ ಕೊರೊನಾ ವೈರಸ್ ಜಾಗೃತಿ  ಮೂಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

 ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವೈರಸ್ ಮುಂಜಾಗ್ರತಾ ಕ್ರಮಗಳ ಬಗ್ಗೆ  ಸಿಎಂ ಬಿ.ಎಸ್.ಯಡಿಯೂರಪ್ಪ ವಿಡಿಯೋ ಮೂಲಕ ಟಿಪ್ಸ್ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿನ  ಖುದ್ದು ರಾಜ್ಯದ ಮುಖ್ಯಮಂತ್ರಿಗಳೇ ಸಾರ್ವಜನಿಕರ ಆತಂಕ ದೂರ ಮಾಡಲು ಮುಂದಾಗಿದ್ದಾರೆ. ಸಿಎಂ ಯಡಿಯೂರಪ್ಪರವರು ಆರೋಗ್ಯ ಇಲಾಖೆ ನೀಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಕೊರೊನಾ ಸೋಂಕನ್ನು ಹೇಗೆ ತಡೆಗಟ್ಟಬಹುದೆಂದು ವಿಡಿಯೋ ಸಂದೇಶದ ಮೂಲಕ  ಅಮೂಲ್ಯ ಟಿಪ್ಸ್ ಗಳನ್ನು ನೀಡಿದ್ದಾರೆ. ಆತಂಕ ಪಡದೇ ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ರಾಜ್ಯದ ಜನರಲ್ಲಿ ಸಿಎ ಮನವಿ ಮಾಡಿಕೊಂಡಿದ್ದಾರೆ.

ಸಿಎಂ ವಿಡಿಯೋ ಸಂದೇಶ

  1. ಜನ ಜಂಗುಳಿಯಿಂದ ದೂರವಿರಿ.
    2.ಆದಷ್ಟು ಮನೆಯಲ್ಲೇ ಇರಿ, ಅಗತ್ಯ ಇದ್ದರೆ ಮಾತ್ರ ಹೊರಗೆ ಬನ್ನಿ.
    3. ಕೈಗಳನ್ನು ಚೆನ್ನಾಗಿ ಆಗಾಗ್ಗೆ ಸೋಪಿನಲ್ಲಿ ತೊಳೆಯುತ್ತಿರಿ.
    4. ಶುದ್ಧ ಕುಡಿಯುವ ನೀರನ್ನೇ ಕುಡಿಯಿರಿ.
    5. ಯಾವುದೇ ದೊಡ್ಡ ಸಮಾವೇಶ, ಸಮಾರಂಭ ಆಯೋಜಿಸಬೇಡಿ.
    6. ವಿದೇಶಗಳಿಂದ ಹಿಂತಿರುಗಿದರೆ ಆರೋಗ್ಯ ಇಲಾಖೆಗೆ ಖಂಡಿತಾ ಮಾಹಿತಿ ನೀಡಿ.
    7. ಕೆಮ್ಮು, ನೆಗಡಿ, ಜ್ವರ, ಗಂಟಲು ಉರಿಯೂತ ಕಂಡು ಬಂದರೆ ತಕ್ಷಣವೇ ವೈದ್ಯರನ್ನು ಕಾಣಿರಿ.
    8. ಕೊರೊನಾ ದೃಡಪಟ್ಟರೆ 14 ದಿನ ಪ್ರತ್ಯೇಕವಾಗಿರಿ, ಕಡ್ಡಾಯ ಚಿಕಿತ್ಸೆ ಪಡೆಯಿರಿ.
    9. ಯಾರೂ ಭಯಭೀತರಾಗಬೇಡಿ, ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಂಡಿದೆ.
    10. ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ, ಸರ್ಕಾರದ ಮಾಹಿತಿಯನ್ನಷ್ಟೇ ನಂಬಿ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top