ಡಿವಿಜಿ ಸುದ್ದಿ, ಮೈಸೂರು :ಮನೆಗಳಲ್ಲಿ ದೀಪ ಬೆಳಗಿಸುವುದರಿಂದ ಕೊರೊನಾ ವೈರಸ್ ದೂರವಾಗುತ್ತಾ..?ದೀಪದಿಂದಲೇ ಈ ಮಾರಕ ಖಾಯಿಲೆ ವಾಸಿಯಾಗುವುದಾದರೆ ಆಗಲಿ ನಮ್ಮದೇನೂ ಅಭ್ಯಂತರವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಏ. 5 ರಂದು ಎಲ್ಲರು ದೀಪ ಹಚ್ಚಿ ಎಂದು ಪ್ರಧಾನಿ ಕರೆ ನೀಡಿದ್ದಾರೆ. ದೀಪದಿಂದಲೇ ಈ ಮಾರಕ ಖಾಯಿಲೆ ವಾಸಿಯಾಗುವುದಾದರೆ ಆಗಲಿ ನಮ್ಮದೇನೂ ಅಭ್ಯಂತರವಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.
ಮೈಸೂರಿನಲ್ಲಿ ಕೊರೊನಾ ಸೋಂಕು ಹೇಗೆ ಹರಡಿತು ಎಂಬುದು ನಿಗೂಢವಾಗಿದೆ. ಸೋಂಕು ತಗಲು ಚೀನಾ ಕಂಟೈನರ್ ಕಾರಣವಿರಬಹುದು. ಜಿಲ್ಲಾಧಿಕಾರಿಗಳು ನನಗೆ ಈ ಮಾಹಿತಿಯನ್ನೇ ನೀಡಿದ್ದಾರೆ. ಚೀನಾದಿಂದ ಬಂದ ಒಂದು ಕಂಟೈನರ್ರಿಂದ P52 ಕೇಸ್ ವ್ಯಕ್ತಿಗೆ ಸೋಂಕು ತಗುಲಿರಬಹುದು. ಈ ಬಗ್ಗೆ ಕಂಟೈನರ್ ಸ್ಯಾಂಪಲ್ ಸಹ ತೆಗೆದುಕೊಳ್ಳಲಾಗಿದೆ. ಅದನ್ನು ಲ್ಯಾಬ್ಗೆ ಕಳುಹಿಸಿದ್ದಾರೆ. ವರದಿ ಬಂದ ನಂತರ ನಿಖರ ಕಾರಣ ಹೊರಬರಲಿದೆ ಎಂದು ಮಾಹಿತಿ ನೀಡಿದರು



