ಪ್ರಧಾನಿ ದೀಪ ಹಚ್ಚಿ ಕರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಏನು ಅಂದ್ರು ಗೊತ್ತಾ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಮೈಸೂರು :ಮನೆಗಳಲ್ಲಿ ದೀಪ ಬೆಳಗಿಸುವುದರಿಂದ ಕೊರೊನಾ ವೈರಸ್ ದೂರವಾಗುತ್ತಾ..?ದೀಪದಿಂದಲೇ ಈ ಮಾರಕ ಖಾಯಿಲೆ ವಾಸಿಯಾಗುವುದಾದರೆ ಆಗಲಿ ನಮ್ಮದೇನೂ ಅಭ್ಯಂತರವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಏ. 5 ರಂದು ಎಲ್ಲರು ದೀಪ ಹಚ್ಚಿ ಎಂದು ಪ್ರಧಾನಿ ಕರೆ ನೀಡಿದ್ದಾರೆ. ದೀಪದಿಂದಲೇ ಈ ಮಾರಕ ಖಾಯಿಲೆ ವಾಸಿಯಾಗುವುದಾದರೆ ಆಗಲಿ ನಮ್ಮದೇನೂ ಅಭ್ಯಂತರವಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.

ಮೈಸೂರಿನಲ್ಲಿ ಕೊರೊನಾ‌ ಸೋಂಕು ಹೇಗೆ ಹರಡಿತು ಎಂಬುದು ನಿಗೂಢವಾಗಿದೆ. ಸೋಂಕು ತಗಲು‌ ಚೀನಾ ಕಂಟೈನರ್ ಕಾರಣವಿರಬಹುದು. ಜಿಲ್ಲಾಧಿಕಾರಿಗಳು ನನಗೆ ಈ ಮಾಹಿತಿಯನ್ನೇ ನೀಡಿದ್ದಾರೆ. ಚೀನಾದಿಂದ ಬಂದ ಒಂದು ಕಂಟೈನರ್‌ರಿಂದ P52 ಕೇಸ್‌ ವ್ಯಕ್ತಿಗೆ ಸೋಂಕು ತಗುಲಿರಬಹುದು. ಈ ಬಗ್ಗೆ ಕಂಟೈನರ್ ಸ್ಯಾಂಪಲ್ ಸಹ ತೆಗೆದುಕೊಳ್ಳಲಾಗಿದೆ. ಅದನ್ನು ಲ್ಯಾಬ್‌ಗೆ ಕಳುಹಿಸಿದ್ದಾರೆ. ವರದಿ ಬಂದ ನಂತರ ನಿಖರ ಕಾರಣ ಹೊರಬರಲಿದೆ ಎಂದು ಮಾಹಿತಿ ನೀಡಿದರು

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *