ತಿರುವನಂತಪುರ: ಕರ್ನಾಟಕ- ಕೇರಳ ಗಡಿ ತೆರೆಯಲಾಗಿದ್ದು, ವೈದ್ಯಕೀಯ ಪತ್ರ ತೋರಿಸಿದರೆ ಮಾತ್ರ ಆಂಬುಲೆನ್ಸ ಮೂಲಕ ಕರ್ನಾಟಕದ ಆಸ್ಪತ್ರೆಗೆ ದಾಖಲಿಸಲು ಕರ್ನಾಟಕ ಒಪ್ಪಿಗೆ ನೀಡಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಕೊರೊನಾ ಸೋಂಕು ಇಲ್ಲದವರಿಗಷ್ಟೇ ಕರ್ನಾಟಕದ ಒಳಗೆ ಬಿಡಲಾಗುವುದು. ಕರ್ನಾಟಕದ ವೈದ್ಯರ ತಂಡವು ತಲಪಾಡಿ ಚೆಕ್ಪೋಸ್ಟ್ನಲ್ಲಿ ರೋಗಿಗಳ ತಪಾಸಣೆ ನಡೆಸಲಿದೆ. ಕಾಸರಗೋಡಿನ ತಲಪಾಡಿ ಮೂಲಕ ರೋಗಿಗಳನ್ನು ಮಂಗಳೂರಿಗೆ ಸಾಗಿಸಲು ಆಂಬ್ಯುಲೆನ್ಸ್ಗಳಿಗೆ ಅವಕಾಶ ನೀಡಲಾಗಿದೆ ಎಂದರು.
ಗಡಿ ತೆರೆಯಬೇಕು ಎಂಬ ವಿಚಾರದಲ್ಲಿ ಕರ್ನಾಟಕ ಮತ್ತು ಕೇರಳದ ನಡುವೆ ಪತ್ರ ವ್ಯವಹಾರಗಳು, ರಾಜೀ ಸಂಧಾನಗಳು, ನ್ಯಾಯಾಂಗ ಹೋರಾಟಗಳೂ ನಡೆದಿದ್ದವು. ಇದ್ಯಾವುದಕ್ಕೂ ಸೊಪ್ಪು ಹಾಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗಡಿ ತೆರೆಯುವ ಪ್ರಶ್ನೆಯೇ ಇಲ್ಲ ಎಂದಿದ್ದರು.
ಸದ್ಯ ಕೊರೊನಾ ಸೋಕಿತರಲ್ಲದವರಿಗೆ ಮಾತ್ರ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳಲು ಕರ್ನಾಟಕ ಸರ್ಕಾರ ಒಪ್ಪಿರುವುದಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.



