ಡಿವಿಜಿ ಸುದ್ದಿ, ದಾವಣಗೆರೆ : ಜಿಲ್ಲಾ ಕಾಂಗ್ರೆಸ್ ಇಂಟಾಕ್ ಕಾರ್ಮಿಕ ವಿಭಾಗದ ಜಿಲ್ಲಾ ಕಟ್ಟಡ ಕಾರ್ಮಿಕರ ಒಕ್ಕೂಟದಿಂದ ನಗರದ ಕುರುಬರ ಕೇರಿಯಲ್ಲಿ ಬಡ ಕಟ್ಟಡ ಕಾರ್ಮಿಕರಿಗೆ ಆಹಾರ ಧಾನ್ಯದ
ಕಿಟ್ ಗಳನ್ನು ಕೆಪಿಸಿಸಿ ಮಾಧ್ಯಮ ವಿಶ್ಲೇಷಕರಾದ ಡಿ. ಬಸವರಾಜ್ ವಿತರಣೆ ಮಾಡಿದರು.
ನಂತರ ಮಾತನಾಡಿದ ಅವರು ದಾನಿಗಳು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದು ಬಡ ಮತ್ತು ಮಧ್ಯಮ ವರ್ಗದವರಿಗೆ ಸಹಾಯ ಮಾಡಬೇಕೆಂದು ಕೇಳಿಕೊಂಡರು. ಈ ಸಂದರ್ಭದಲ್ಲಿ ದಾನಿಗಳಾದ ಬಿ.ಆರ್. ನವೀನ್ ಕುಮಾರ್ , ಇಂಟಾಕ್ ಜಿಲ್ಲಾಧ್ಯಕ್ಷ ಕೆ.ಎಂ. ಮಂಜುನಾಥ್, ಗುರುಕುಲ ಶಾಲೆಯ ಆರ್. ಅಬ್ದುಲ್, ಅರ್ಚಕ ಬಕ್ಕೇಶ್, ನಾಗರಾಜ್ ಬಂಡಿವಡ್ಡರ, ಕೊಂಡಜ್ಜಿ ಮಲ್ಲಿಕಾರ್ಜುನ್ , ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ.ಎಲ್. ಹರೀಶ್ ಬಸಾಪುರ ಉಪಸ್ಥಿತರಿದ್ದರು.



