ಡಿವಿಜಿ ಸುದ್ದಿ, ಕಾರವಾರ: ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ತರಬೇತಿ ಪಡೆಯುತ್ತಿದ್ದ ಇಬ್ಬರು ವೈದ್ಯರು ಸೋಂಕಿಗೆ ಹೆದರಿ ಆಸ್ಪತ್ರೆಯಿಂದ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ಕಾರವಾರದ ನೌಕಾನೆಲೆಯಲ್ಲಿರುವ ಪತಂಜಲಿ ಆಸ್ಪತ್ರೆಗೆ ಕೊರೊನಾ ಸೋಂಕಿತ ಆರು ಜನ ರೋಗಿಗಳಿದ್ದು, ಇವರಿಗೆ ಚಿಕಿತ್ಸೆ ಕೊಡಲು ತರಬೇತಿ ನೀಡಿ ಇಬ್ಬರು ವೈದ್ಯರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಕಾರ್ ಪಾರ್ಕ್ ಮಾಡಿ ಬರುವುದಾಗಿ ಹೇಳಿ ಹೋದ ಈ ವೈದರು ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ.
ಕರ್ತವ್ಯ ಲೋಪ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿ.ಇ.ಒ ಆರ್.ರೋಷನ್ ರಿಂದ ನೋಟಿಸ್ ನೀಡಿದ್ದು, ಏಳು ದಿನದಲ್ಲಿ ಉತ್ತರ ನೀಡಬೇಕಿದೆ. ಇದಲ್ಲದಿದ್ದಲಗ್ಲಿ ಕರ್ತವ್ಯ ಲೋಪದಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.



