ಡಿವಿಜಿ ಸುದ್ದಿ, ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್ ಡೌನ್ ಕುರಿತು ಮಾರ್ಗ ಸೂಚಿ ನೀಡಿದ ಬಳಿಕವಷ್ಟೇ ಲಾಕ್ಡೌನ್ ಸಡಿಲಗೊಳಿಸಲಾಗುತ್ತದೆ. ಈ ಮಾರ್ಗ ಸೂಚಿ ಅನ್ವಯ ಮದ್ಯ ಮಾರಾಟ ಕುರಿತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಪ್ರಧಾನಿಗಳು ಲಾಕ್ ಡೌನ್ ಹೇಗಿರಬೇಕು ಎನ್ನುವುದರ ಬಗ್ಗೆ ಸಲಹೆ ನೀಡುವುದಾಗಿ ತಿಳಿಸಿದ್ದಾರೆ. ಕೆಲ ರಾಜ್ಯಗಳಿಗೆ ಲಾಕ್ಡೌನ್ ಬಗ್ಗೆ ಅಲ್ಲಿನ ಸರ್ಕಾರಗಳೇ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಸೂಚಿಸಿದ್ದಾರೆ ಎಂದರು.
ಎಂಎಸ್ಐಎಲ್ ಮೂಲಕ ಮದ್ಯ ಮಾರಾಟದ ಬಗ್ಗೆ ಚರ್ಚೆ ನಡೆಯುತ್ತಿದೆ. ಕೇಂದ್ರ ಸರ್ಕಾದಿಂದ ಮಾರ್ಗಸೂಚಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರದಿಂದ ಇನ್ನು ಮಾರ್ಗಸೂಚಿ ಬಂದಿಲ್ಲ ಎಂದರು.



