ಡಿವಿಜಿ ಸುದ್ದಿ, ದಾವಣಗೆರೆ: ಕೊವಿಡ್-19 ವೈರಸ್ ನಿಯಂತ್ರಣ ಲಾಕ್ಡೌನ್ ಹಿನ್ನೆಲೆಯಲ್ಲಿ ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಅವರು ಇಂದು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಿ.ಜಿ.ಜಿಲ್ಲಾಸ್ಪತ್ರೆಯಲ್ಲಿ ತೆರೆಯಲಾಗಿರುವ ಫ್ಲೂ ಕಾರ್ನರ್ರನ್ನು ಹಾಗೂ ಕೋವಿಡ್ ಆಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿದರು. ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಂ.ಪಿ.ರೇಣುಕಾಚಾರ್ಯ, ಪ್ರೊ.ಲಿಂಗಣ್ಣ, ದೂಡಾ ಅಧ್ಯಕ್ಷ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇನ್ನಿತರರು ಇದ್ದರು.



