Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

arecanut rate today
ದಾವಣಗೆರೆ: ರಾಶಿ ಅಡಿಕೆ ಬೆಲೆ ತುಸು‌ ಕುಸಿತ; ಇಂದಿನ ಕನಿಷ್ಠ, ಗರಿಷ್ಠ ಬೆಲೆ ಎಷ್ಟಿದೆ..?
davangere dc sp
ದಾವಣಗೆರೆ: ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಪಾರದರ್ಶಕವಾಗಿ ನಡೆಸಲು ಕ್ರಮ: ಜಿಲ್ಲಾಧಿಕಾರಿ
davangere independent day
ದಾವಣಗೆರೆ: ಅದ್ದೂರಿಯಾಗಿ ಸ್ವಾತಂತ್ರ್ಯ ದಿನಾಚರಣೆಗೆ ಕ್ರಮವಹಿಸಿ; ಜಿಲ್ಲಾಧಿಕಾರಿ
bike accident 1
ದಾವಣಗೆರೆ: ಬೈಕ್ ಸವಾರನ ಮೇಲೆ ಹರಿದ ಟಿಪ್ಪರ್; ಸವಾರ ಸಾವು
fish
ದಾವಣಗೆರೆ: ಮೀನುಗಾರರಿಗೆ ವಿವಿಧ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

Socials

Home

ಅಕ್ಷರ, ಅನ್ನ ದಾಸೋಹದ ಕಾಯಕ ಯೋಗಿ: ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: September 15, 2019
Share
2 Min Read
SHARE

ಕನ್ನಡನಾಡು ಕಂಡು ಕೇಳರಿಯದ ಅಪ್ರತಿಮ ಧೀರ ಸನ್ಯಾಸಿ…. ಭಕ್ತರ ಸುಖ ದುಃಖಗಳನ್ನು ತಮ್ಮವೇ ಸುಖ ದುಃಖಗಳೆಂದು ಭಾವಿಸಿ ಸಮಾಜದ ಕಣ್ಣೀರೊರೆಸಿ ಬಿದ್ದವರ ಬಾಳಿನಲ್ಲಿ ನಗೆಯ ಬೆಳದಿಂಗಳನ್ನು ಮೂಡಿಸಲು ತಮ್ಮ ಇಡೀ ಬಾಳನ್ನೇ ಮುಡುಪಾಗಿಟ್ಟವರು…

ಹಳ್ಳಿಗಾಡುಗಳಲ್ಲಿ ನೆಲೆ ಕಳೆದುಕೊಂಡ ಬೇರುಗಳಿಗೆ ಶಿಕ್ಷಣದ ನೀರೆರೆದು ಬದುಕಿ, ಸುಡುವ ಬೆಂಗಾಡಿನಲ್ಲಿಯೂ ಏಳುಸುತ್ತಿನ ಬೆಳ್ಳನೆಯ ಮಲ್ಲಿಗೆಯನ್ನು ಅರಳಿಸಿದವರು…ಬಸವಣ್ಣನವರ ವಚನವಾರಿಧಿಗೆ ಬರೆದ ಹೊಸ ಭಾಷ್ಯದಂತಿತ್ತು ಅವರ ನಿರ್ಮಲ ಬದುಕು… ಹಾಗೆಯೇ ಕಡು ವೈರಿಯೂ ಮೆಚ್ಚಿ ತಲೆದೂಗುವಂತಿದ್ದ ಸಿರಿಗೆರೆಯ ತರಳಬಾಳು ಮಠದ ಹಿರಿಯ ಗುರುಗಳಾದ ಲಿಂಗೈಕ್ಯ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಬದುಕು…..

taralabalu dvgsuddi3

ಉರಿ ಬರಲಿ ಸಿರಿ ಬರಲಿ…ಆಂಜದ ಅಳುಕದ ಅದರ ಧೀರ ನಡೆ-ನುಡಿಯಿಂದ ಸಾಧು ಲಿಂಗಾಯತ ಸಮಾಜವನ್ನು ಮುನ್ನಡೆಸಿದರು… ‘ಕಾಯಕವೇ ಶಿವಪೂಜೆ , ಜನತೆಯೇ ಜಂಗಮವೆಂದು’ ನುಡಿದು ಅದರಂತೆ ನಡೆದು ಈ ಭವದ ಬದುಕಿನಲ್ಲಿ ನಿರತಾವರೆಯಂತೆ ನಡೆಸಿದ ಅವರ ಬದುಕು ಅನನ್ಯ, ಅಸದೃಶ…

Related News

arecanut rate today
ದಾವಣಗೆರೆ: ರಾಶಿ ಅಡಿಕೆ ಬೆಲೆ ತುಸು‌ ಕುಸಿತ; ಇಂದಿನ ಕನಿಷ್ಠ, ಗರಿಷ್ಠ ಬೆಲೆ ಎಷ್ಟಿದೆ..?
July 31, 2026
davangere dc sp
ದಾವಣಗೆರೆ: ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಪಾರದರ್ಶಕವಾಗಿ ನಡೆಸಲು ಕ್ರಮ: ಜಿಲ್ಲಾಧಿಕಾರಿ
July 30, 2026
davangere independent day
ದಾವಣಗೆರೆ: ಅದ್ದೂರಿಯಾಗಿ ಸ್ವಾತಂತ್ರ್ಯ ದಿನಾಚರಣೆಗೆ ಕ್ರಮವಹಿಸಿ; ಜಿಲ್ಲಾಧಿಕಾರಿ
July 29, 2026

taralabalu dvgsuddi4

ಸೆ. 24 ರಂದು ಶ್ರದ್ಧಾಂಜಲಿ ಸಮಾರಂಭಸಿ

Related News

bike accident 1
ದಾವಣಗೆರೆ: ಬೈಕ್ ಸವಾರನ ಮೇಲೆ ಹರಿದ ಟಿಪ್ಪರ್; ಸವಾರ ಸಾವು
July 29, 2026
fish
ದಾವಣಗೆರೆ: ಮೀನುಗಾರರಿಗೆ ವಿವಿಧ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
July 28, 2026
govt
ದಾವಣಗೆರೆ: 40 ಲಕ್ಷದ ಹೈಟೆಕ್ ಹಾರ್ವೆಸ್ಟರ್ ಹಬ್ ಘಟಕ ಸ್ಥಾಪನೆ; ಶೇ.50ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ
July 28, 2026

ರಿಗೆರೆ ಬೃಹನ್ಮಠದ ಸಿಂಹಾಸನವನ್ನು ತೆರವು ಮಾಡಿ ಅದನ್ನು ತಮ್ಮ ಉತ್ತರಾಧಿಕಾರಿ ಗುರುವಿಗೆ ನೀಡಿದ್ದಾರೆಂಬುದು ನಿಜ . ಆದರೆ ತಮ್ಮ ಭಕ್ತರು ಮುಹೂರ್ತ ಮಾಡಿಸಿದ ಸಿಂಹಾಸನವನ್ನು ಅವರು ಎಂದೂ ತೆರವು ಮಾಡಲಾರರು. ಏಕೆಂದರೆ ಅವರ ಭಕ್ತರ ಹೃದಯವೇ ಆಗಿದೆ. ಸದ್ಭಕ್ತರ ಹೃದಯ ಸಿಂಹಾಸನಾಧೀಶ್ವರರಾದ ಅವರನ್ನು ನೆನೆಯುವುದೇ ಪುಣ್ಯಕರ… ಇದೀಗ ಅವರ 27ನೇಯ ‌ಶ್ರದ್ಧಾಂಜಲಿ ಸಮಾರಂಭ ಇದೇ ತಿಂಗಳು 24 ರಂದು ನಡೆಯಲಿದೆ. ಈ ಸಮಾರಂಭದಲ್ಲಿ ಸಮಾಜದ ಬಂಧುಗಳು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ…

taralabalu mata dvgsuddi

ಈ ಸಮಾರಂಭವು ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಿ ನಡೆಯಲಿದ್ದು, ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು, ಕೇಂದ್ರ ಸರ್ಕಾರದ ಸಚಿವರುಗಳಾದ ಪ್ರಹ್ಲಾದ ಜೋಶಿರವರು, ಸುರೇಶ್ ಅಂಗಡಿಯವರು, ರಾಜ್ಯ ಸರ್ಕಾರದ ಸಚಿವರುಗಳು, ಶಾಸಕರುಗಳು ಭಾಗವಹಿಸುವರು…

ಅಮರಾವತಿಯಲ್ಲಿ ಅಕ್ಕಿ ಸಮರ್ಪಣೆ

Related News

arecanut rate today
ದಾವಣಗೆರೆ: ರಾಶಿ ಅಡಿಕೆ ಬೆಲೆ ಮತ್ತೆ ಭರ್ಜರಿ ಏರಿಕೆ; ಕೊಯ್ಲು ಆರಂಭದಲ್ಲಿ ರೈತರಿಗೆ ಗುಡ್ ನ್ಯೂಸ್
July 27, 2026
bhadra dam dvgsuddi
ಭದ್ರಾ ಜಲಾಶಯ: ತಗ್ಗಿದ ಮಳೆ ; ಒಳ ಹರಿವು ಕುಸಿತ ಇಂದಿನ ನೀರಿನ ಮಟ್ಟ 153.3 ಅಡಿ
July 27, 2026
bhadra dam dvgsuddi
ಭದ್ರಾ ಜಲಾಶಯ: ಒಳ ಹರಿವು 6,472 ಕ್ಯೂಸೆಕ್; ಇಂದಿನ ನೀರಿನ ಮಟ್ಟ 152.1 ಅಡಿ
July 25, 2026

ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗವಹಿಸುವ ಲಕ್ಷಾಂತರ ಭಕ್ತರ ದಾಸೋಹ ಕೈಂಕರ್ಯಕ್ಕೆ ಹಲವಾರು ತಾಲ್ಲೂಕಿನ ಭಕ್ತರು ಅಕ್ಕಿ ಸಮರ್ಪಣೆಗೈಯುವ ಪ್ರತೀತಿ ಕಳೆದ 27 ವರ್ಷಗಳಿಂದ ನಡೆಯುತ್ತಾ ಬಂದಿದೆ. ಅಂತೆಯೇ ಈ ವರ್ಷದ ಅಕ್ಕಿ ಸಮರ್ಪಣೆ ಕಾರ್ಯಕ್ರಮ ಹೊನ್ನಾಳಿ, ಭದ್ರಾವತಿ, ಶಿವಮೊಗ್ಗ, ದೇವಕಾತಿ ಕೊಪ್ಪ ದಲ್ಲಿ ಜರುಗಿದ್ದು.ಇಂದು ಹರಿಹರ ತಾಲ್ಲೂಕಿನ ಅಮರಾವತಿಯಲ್ಲಿ ನಡೆಯಿತು…..

taralabalu dvgsuddi1

ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀಗಳು ಶ್ರೀ ಮಠವು ರೈತಪರವಾಗಿ, ಹತ್ತಾರು ನೀರಾವರಿ ಅನುಷ್ಠಾನಕ್ಕೆ ಶ್ರಮಿಸುತ್ತಿದ್ದು, ಸರ್ಕಾರಗಳ ಉತ್ತಮ ಸ್ಪಂದನೆಯಿಂದ ಸಾವಿರಾರು ಕೋಟಿ ರೂಪಾಯಿಗಳು ಬಿಡುಗಡೆಯಾಗಿದ್ದು, ಇನ್ನೊಂದು ವರ್ಷದಲ್ಲಿ ಯೋಜನೆಗಳು ಯಶಸ್ವಿಯಾಗಿ ಕಾರ್ಯಗತವಾಗುವ ಭರವಸೆ ಇದೆ ಎಂದರು.

ಉತ್ತರ ಕರ್ನಾಟಕದ ನೆರೆ ಪರಿಹಾರಕ್ಕೆ ದೊರೆತ ಸ್ಪಂದನೆ ಎಲ್ಲರೂ ಮೆಚ್ಚುವಂತಹ ದಾಗಿದ್ದು, ಧರ್ಮ ಜೀವಂತಿಕೆ ಎಂಬುದು ಇದರಿಂದ ಮನವರಿಕೆಯಾಗುತ್ತದೆ. ಈಗಾಗಲೇ ಶ್ರೀ ಮಠದಿಂದ ಉತ್ತರ ಕರ್ನಾಟಕದ ಬೆಳಗಾವಿ, ಗದಗ ಜಿಲ್ಲೆಯ ವಿವಿಧ ಹಳ್ಳಿಗಳಿಗೆ ಪರಿಹಾರ ವಿತರಣೆ ಮಾಡಲಾಗಿದೆ.

ಮೂರನೇ ಹಂತವಾಗಿ ಹಾವೇರಿ ಜಿಲ್ಲೆಯ ಹಳ್ಳಿಗಳಿಗೆ ನೆರವು ನೀಡುವುದಾಗಿ ಘೋಷಿಸಿದರು. ಪೂಜ್ಯ ಶ್ರೀಗಳವರನ್ನು ಸಾವಿರಾರು ಗ್ರಾಮಸ್ಥರು, ಯುವಕರು, ಮಹಿಳೆಯರು ಭಕ್ತಿ ಪೂರ್ವಕವಾಗಿ, ಉತ್ಸಾಹದಿಂದ ಸ್ವಾಗತಿಸಿದರು.

TAGGED:#ತರಳಬಾಳು ಮಠDavanagerefeaturedSirigere shriTaralabalu jagadaguruಶ್ರೀ ಶಿವಕುಮಾರ ಸ್ವಾಮೀಜಿ
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ವಿಶ್ವ ವಿಖ್ಯಾತ ದಸರೆಗೆ ಆಹ್ವಾನ
Next Article ನನ್ನ ಫೋನ್ ಕೂಡ ಕದ್ದಾಲಿಕೆ: ಶಾಮನೂರು ಶಿವಶಂಕರಪ್ಪ
Leave a Comment

Leave a Reply Cancel reply

Your email address will not be published. Required fields are marked *

Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!