ಡಿವಿಜಿ ಸುದ್ದಿ, ಬೆಂಗಳೂರು: ಮಹಾಮಾರಿ ಕೊರೊನಾಗೆ ಬೆಂಗಳೂರಿನ 66 ವರ್ಷದ ವ್ಯಕ್ತಿಯೊಬ್ಬ ಗುರುವಾರ ಬಲಿಯಾಗಿದ್ದಾರೆ. ಇದರಿಂದಾಗಿ ಬೆಂಗಳೂರಿನಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾದರೆ, ರಾಜ್ಯದಲ್ಲಿ ಒಟ್ಟಾರೆ 13 ಮಂದಿ ಬಲಿ ಪಡೆದುಕೊಂಡಿದೆ.
ಮೃತರಾದ ಬೆಂಗಳೂರಿನ ವ್ಯಕ್ತಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಅವರನ್ನು ಏ.10ರಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಇತ್ತ ಮೈಸೂರಿನಲ್ಲಿ ಬುಧವಾರ ಒಂದೇ ದಿನ 10 ಪ್ರಕರಣಗಳು ವರದಿಯಾಗಿದ್ದು, ಚಿಕ್ಕಬಳ್ಳಾಪುರದ 65 ವರ್ಷದ ವ್ಯಕ್ತಿ ಹಾಗೂ ಬೆಳಗಾವಿಯ 80 ವರ್ಷದ ವೃದ್ಧೆ ಕೋವಿಡ್–19ಕ್ಕೆ ಸಾವಿಗೀಡಾಗಿದ್ದರು.
ರಾಜ್ಯದಲ್ಲಿ ಬುಧವಾರ ಒಂದೇ ದಿನ 19 ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಒಂದೇ ದಿನ ಅತ್ಯಧಿಕ ಪ್ರಕರಣ ವರದಿಯಾದಂತಾಗಿದೆ. ಬೆಂಗಳೂನಲ್ಲಿ ಒಟ್ಟು 71 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 31 ಮಂದಿ ಗುಣಮುಖರಾಗಿದ್ದಾರೆ.



