Connect with us

Dvgsuddi Kannada | online news portal | Kannada news online

ಕೊರೊನಾ ವಿರುದ್ಧದ ಹೋರಾಟಕ್ಕೆ ಲಾಕ್ ಡೌನ್ ಪರಿಹಾರವಲ್ಲ; ರಾಹುಲ್ ಗಾಂಧಿ

ಪ್ರಮುಖ ಸುದ್ದಿ

ಕೊರೊನಾ ವಿರುದ್ಧದ ಹೋರಾಟಕ್ಕೆ ಲಾಕ್ ಡೌನ್ ಪರಿಹಾರವಲ್ಲ; ರಾಹುಲ್ ಗಾಂಧಿ

ನವದೆಹಲಿ: ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಟಕ್ಕೆ ಲಾಕ್‌ಡೌನ್ ಪರಿಹಾರವಲ್ಲ. ಲಾಕ್ ಡೌನ್ ಸೋಂಕು ಹರಡುವುದನ್ನು  ಕಡಿಮೆ ಮಾಡಬಹುದು. ಆದರೆ, ಸಂಪೂರ್ಣ ತೊಲಗಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ವಿಡಿಯೋ ಆಪ್ ಮೂಲಕ ಸುದ್ದಿಗೋಷ್ಠಿ ನಡೆಸಿದ ಅವರು, ಸರ್ಕಾರ ಟೆಸ್ಟಿಂಗ್ ಪ್ರಮಾಣವನ್ನು ಯೋಜಿತ ರೀತಿಯಲ್ಲಿ ನಡೆಸಬೇಕ. ಕೊರೊನಾ ವೈರಾಣುವನ್ನು ಲಾಕ್‌ಡೌನ್‌ ಮಣಿಸುತ್ತದೆ ಎಂದುಕೊಳಳಲಾಗದು. ಲಾಕ್‌ಡೌನ್‌ನಿಂದ ವೈರಾಣು ಹರಡುವುದನ್ನು ಒಂದಿಷ್ಟು ನಿಯಂತ್ರಿಸಬಹುದಷ್ಟೇ.  ಹೀಗಾಗಿ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಿ,  ಸೋಂಕಿತರಿಗೆ ಚಿಕಿತ್ಸೆಗೆ ನೀಡುವುದು ಸರ್ಕಾರದ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.

ಈಗಿನ ಸನ್ನಿವೇಶ ಗಮನಿಸಿದರೆ ಲಾಕ್ ಡೌನ್ ನಿಂದ  ಮಹಾ ಪಿಡುಗಿನ ಯಥಾ ಸ್ಥಿತಿ ಖಂಡಿತ ಆಗುವುದಿಲ್ಲ.ಪ್ರಸ್ತುತ ದೇಶದಲ್ಲಿ ಅತ್ಯಂತ ಕನಿಷ್ಠ ಮಟ್ಟದಲ್ಲಿ ಟೆಸ್ಟಿಂಗ್‌ಗಳು ನಡೆಯುತ್ತಿವೆ. ಈ ಪ್ರಮಾಣವನ್ನು ದೊಡ್ಡಮಟ್ಟದಲ್ಲಿ ಹೆಚ್ಚಿಸಬೇಕಿದೆ.

ದೇಶದ ಆರ್ಥಿಕ ಸ್ಥಿತಿಗತಿ ಮತ್ತು ಆರ್ಥಿಕ ಸಮಸ್ಯೆಗಳ ನಿರ್ವಹಣೆಗೆ ಒಂದು ಯೋಜನೆ ರೂಪಿಸಬೇಕು. ಬಡವರಿಗೆ ಅಗತ್ಯ ವಸ್ತುಗಳು ಕೈಗೆ ಸಿಗುವಂತೆ ಆಗಬೇಕು. ಪ್ರಧಾನಿಯೊಂದಿಗೆ ನನಗೆ ಹಲವು ವಿಚಾರಗಳ ಬಗ್ಗೆ ಭಿನ್ನಮತವಿದೆ. ಆದರೆ ಭಿನ್ನಮತದ ಬಗ್ಗೆ ಚರ್ಚಿಸಲು ಇದು ಸಮಯವಲ್ಲ. ನಾವೆಲ್ಲರೂ ಒಂದಾಗಿ ಮಹಾಪಿಡುಗಿನ ವಿರುದ್ಧ ಹೋರಾಡಬೇಕಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳ ಜೊತೆಗೆ ವಿವರಣಾತ್ಮಕ ಸಂವಾದ ನಡೆಸಬೇಕು. ಆದರೆ ಅವರ ಕಾರ್ಯವೈಖರಿಯೇ ವಿಭಿನ್ನವಾಗಿದೆ. ಈ  ಹಿಂದೆ ಏನಾಯಿತು ಎಂಬುದನ್ನು ನಾನು ವಿಮರ್ಶಿಸುವುದಿಲ್ಲ. ನಾವು ಪರಸ್ಪರ ಬೈದಾಡಿಕೊಳ್ಳದೆ.  ಒಂದಾಗಿ ಕೊರೊನಾ ವೈರಸ್ ವಿರುದ್ಧ  ಶ್ರಮಿಸೋಣ. ನಮ್ಮ ಸಂಪನ್ಮೂಲವನ್ನು ರಾಜ್ಯಗಳು ಮತ್ತು ಜಿಲ್ಲಾಡಳಿತಕ್ಕೆ ತಲುಪಿಸೋಣ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top