ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಮದ್ಯ ಮಾರಾಟ ನೀಷೆಧಿಸಿದೆ. ಹಿನ್ನೆಲೆ ಸಿದ್ದವೀರಪ್ಪ ಬಡಾವಣೆಯ ನಿವಾಸಿ ದಲ್ಲಾಳಿ ಬಸವರಾಜಪ್ಪ, 57 ವರ್ಷ ಇವರು ಔಷಧಿ ಅಂಗಡಿಗಳಲ್ಲಿ ದೊರೆಯುವ ಸರ್ಜಿಕಲ್ ಸ್ಪಿರಿಟ್ ಬಿ.ಪಿ ಯನ್ನು ಬಳಸಿ ನಕಲಿ ಮದ್ಯ ತಯಾರಿಸಿ ಅಮಾಯಕರಿಗೆ ಮಾರಾಟ ಮಾಡುತ್ತಿದ್ದ ಪತ್ತೆಯಾಗಿದೆ.
ಆರೋಪದ ಮೇರೆಗೆ ಅಬಕಾರಿ ಇಲಾಖೆ ದಾಳಿ ನಡೆಸಿ ಒಟ್ಟು 3 ಲೀಟರ್ ನೀರು ಮಿಶ್ರಿತ ಸರ್ಜಿಕಲ್ ಸ್ಪಿರಿಟ್ನ್ನು ವಶಪಡಿಸಿಕೊಂಡು ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ.
ಆರೋಪಿ ವಿರುದ್ದ ಮೊಕದಮ್ಮೆಯನ್ನು ದಾಖಲಿಸಿ ಪ್ರಥಮ ವರ್ತಮಾನ ವರದಿಯೊಂದಿಗೆ ಘನ ನ್ಯಾಯಲಯಯಕ್ಕೆ ಸಲ್ಲಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತರಾದ ನಾಗರಾಜಪ್ಪ. ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



