Connect with us

Dvgsuddi Kannada | online news portal | Kannada news online

ಜಮೀರ್ ಖಾನ್ ಅರೆ ಹುಚ್ಚ, ಮತಾಂಧ; ದೇಶ ದ್ರೋಹಿಗಳಿಗೆ ಗುಂಡೇಟಿನ ಸದ್ದು ಕೇಳಿಸಬೇಕಿದೆ:  ರೇಣುಕಾಚಾರ್ಯ

ಪ್ರಮುಖ ಸುದ್ದಿ

ಜಮೀರ್ ಖಾನ್ ಅರೆ ಹುಚ್ಚ, ಮತಾಂಧ; ದೇಶ ದ್ರೋಹಿಗಳಿಗೆ ಗುಂಡೇಟಿನ ಸದ್ದು ಕೇಳಿಸಬೇಕಿದೆ:  ರೇಣುಕಾಚಾರ್ಯ

ಡಿವಿಜಿ ಸುದ್ದಿ, ದಾವಣಗೆರೆ: ಜಮೀರ್ ಒಬ್ಬ ಅರೆ ಹುಚ್ಚ,ಮತಾಂಧ. ಪ್ರತಿ ಸಲ ದೇಶ ದ್ರೋಹ ಕೇಳಿಕೆ ನೀಡುವ ಜಮೀರ್ ಖಾನ್ ಗೆ ಗುಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಿ ಜೈಲಿಗೆ ಕಳುಹಿಸಬೇಕಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಕಿಡಿಕಾರಿದರು.

ನ್ಯಾಮತಿಯಲ್ಲಿ ಬಡವರಿಗೆ ಆಹಾರ ಕಿಟ್ ವಿತರಣೆ ನಂತರ ಮಾತನಾಡಿದ ಅವರು, ಪಾದರಾಯನಪುರ ಘಟನೆಯಲ್ಲಿ ಜಮೀರ್ ಖಾನ್ ನೇರವಾಗಿ ಭಾಗಿಯಾಗಿದ್ದಾರೆ. ಇಂಥವರನ್ನು  ಗುಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಿ ಜೈಲಿಗೆ ಕಳುಹಿಸಬೇಕು. ಇನ್ನು ಅವರನ್ನು ಸಮರ್ಥಿಸಿಕೊಳ್ಳುವ ಮಾಜಿ ಸಚಿವ ಯು.ಟಿ. ಖಾದರ್ ಕೂಡ ಮತಾಂಧ ಎಂದರು.

renukacharay food kits dvgsuddi

ಪ್ರತಿ ಸಲ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ  ಜಮೀರ್ ಖಾನ್, ಸಮಾಜದಲ್ಲಿ ಅಶಾಂತಿ ಸೃಷ್ಠಿ ಮಾಡುತ್ತಿದ್ದಾರೆ. ಇಂತಹ ದೇಶದ್ರೋಹ ಹೇಳಿಕೆ ನೀಡುವವರಿಗೆ ಗುಂಟೇಟಿನಿಂದ ಮಾತ್ರ ದಾರಿಗೆ ಬರಲು ಸಾಧ್ಯ. ದೇಶದಲ್ಲಿ ಯಾರೇ ದೇಶ ದ್ರೋಹ ಹೇಳಿಕೆ ನೀಡಿದರೂ, ಅವರಿಗೆ ಗುಂಡೇಟು ಸದ್ದು ಕೇಳಿಸಬೇಕಿದೆ. ಈ ಮೂಲಕ ದೇಶದ್ರೋಹಿಗಳನ್ನು ಹತ್ತಿಕ್ಕಲು ಸಾಧ್ಯ ಎಚ್ಚರಿಕೆ ನೀಡಿದರು.

ದೇಶದಲ್ಲಿ ಕೋವಿಡ್-19 ನಿಂದ  ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ. ಈ ಸಂದರ್ಭದಲ್ಲಿ ವೈದ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ನರ್ಸ್ ಗಳು ತಮ್ಮ ಜೀವನವನ್ನೇ ಮುಡುಪಾಗಿಟ್ಟು ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಿಬ್ಬಂದಿಗಳಿಗೆ ಸ್ಪಂದಿಸದೇ, ಅಧಿಕಾರಿಗಳ ಮೇಲೆ ಹಲ್ಲೆ ಮಾಡುವ  ವರ್ತನೆ ಸರಿಯಲ್ಲ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top