ನಲ್ಲೂರಲ್ಲಿ ಸಾವಿರ ಆಹಾರ ಕಿಟ್ ವಿತರಿಸಿದ ಶಾಸಕ ಮಾಡಾಳ್ ವಿರುಪಾಕ್ಷಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ:   ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ  ವಿರುಪಾಕ್ಷಪ್ಪ ಅವರು  ಇಂದು ನಲ್ಲೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ  ಕೊರೋನಾ ವಿರುದ್ಧ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ, ಬಡವರಿಗೆ ಒಂದು ಸಾವಿರ  ಆಹಾರ  ಕಿಟ್ ವಿತರಿಸಿದರು.

food kit virupakshappa 2

ಉಳ್ಳವರಿಂದ ದೇಣಿಗೆ ಸಂಗ್ರಹಿಸಿ, ತಮ್ಮ ಅನುದಾನವನ್ನು  ಸೇರಿಸಿ ಬಡ ಕುಟುಂಬಗಳಿಗೆ ಆಹಾರದ ಕಿಟ್ ನೀಡಿದರು. ಇಂದು ತಾಲ್ಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ಅಹಾರದ ಕಿಟ್ಟುಗಳನ್ನು ವಿತರಿಸಿ ಮಾತನಾಡಿದ ಮಾಡಾಳ್ ವಿರುಪಾಕ್ಷಪ್ಪ,  ಮಹಾಮಾರಿ‌ ಕೊರೊನಾ ರೋಗದ ಬಗ್ಗೆ ಜಾಗೃತವಾಗಿರಬೇಕು. ಸರ್ಕಾರ ನಿಮ್ಮಗಳ ಪರವಾಗಿದೆ ಏನೇ ಸಮಸ್ಯೆ ಇರಲಿ, ಸಹಾಯಕ್ಕೆ ಸದಾ ಸಿದ್ಧವಾಗಿದ್ದೇವೆ ಎಂದರು.

food kit virupakshappa 3

ಈ ಸಂದರ್ಭದಲ್ಲಿ ಚನ್ನಗಿರಿ ಡಿವೈಎಸ್ಪಿ ಪ್ರಶಾಂತ್ ಮುನ್ನೊಳಿ , ತಹಶೀಲ್ದಾರ್ ಜೆಎನ್ ನಾಗರಾಜ್,  ತಾ ಪಂ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್ . ಪೋಲಿಸ್ ವೃತ್ತ ನಿರೀಕ್ಷ  ಆರ್ ಆರ್ ಪಾಟೀಲ್ , ಚನ್ನಗಿರಿ  ಪಿಎಸ್ಐ ಜಗದೀಶ್ . ಜಿ ಪಂ‌ ಸದಸ್ಯ ಲೋಕೇಶ್,  ಬಗರ್ ಹುಕ್ಕುಂ ಕಮಿಟಿ ಸದಸ್ಯ ಹೆಚ್ . ಕೃಷ್ಣಪ್ಪ ಗ್ರಾಪಂ ಅಧ್ಯಕ್ಷರು,  ಸದಸ್ಯರು ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರುಗಳು‌ ಉಪಸ್ಥಿತರಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *