ಡಿವಿಜಿ ಸುದ್ದಿ, ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲ್ಲೇ ಸಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದ 26 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಇದುವರೆಗೆ 500 #COVID19 ಪ್ರಕರಣಗಳು ಖಚಿತಗೊಂಡಿವೆ. ಅವುಗಳ ಪೈಕಿ 18 ಮರಣ ಹಾಗೂ 158 ಜನ ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ. #IndiaFightsCornona #ಮನೆಯಲ್ಲೇಇರಿ pic.twitter.com/mukZWPTXRG
— B Sriramulu (@sriramulubjp) April 25, 2020
ಬೆಂಗಳೂರಿನಲ್ಲಿ 11 ಜನರಿಗೆ ಹಾಗೂ ಬೆಳಗಾವಿಯಲ್ಲಿ 9 ಮಂದಿಗೆ ಕೊರೊನಾ ದೃಢಪಟ್ಟಿದೆ. ಮಂಡ್ಯ, ಮೈಸೂರು, ದಕ್ಷಿಣ ಕನ್ನಡ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಲಾ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಇದುವರೆಗೂ ರಾಜ್ಯದಲ್ಲಿ 158 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 18 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.



