ನವದೆಹಲಿ: ದೇಶದಲ್ಲಿ ಹೇರಲಾಗಿರುವ ಲಾಕ್ಡೌನ್ನಿಂದ ಸಾವಿರಾರು ಜೀವಗಳನ್ನು ರಕ್ಷಿಸಲಾಗಿದೆ. ಆದರೆ, ಕೊರೊನಾ ವೈರಸ್ ಮುಂಬರುವ ದಿನಗಳಲ್ಲಿಯೂ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ದಿನಗಳಲ್ಲಿ ಮಾಸ್ಕ್ ಜೀವನದ ಒಂದು ಭಾಗವಾಗಿರಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೆರೆ ನೀಡಿದರು.
Impact of Coronavirus will remain visible in the coming months, masks & face covers will be part of our life: PM Narendra Modi in his video conference meeting with Chief Ministers pic.twitter.com/aEhVdXnuBx
— ANI (@ANI) April 27, 2020
ಕಾಲ್ ಡೌನ್ ಮತ್ತು ಕೊರೊನಾ ವೈರಸ್ ನಿಯಂತ್ರಣ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಸಭೆ ವೇಳೆ ಪ್ರಧಾನಿ ಮೋದಿ, ಮಾಸ್ಕ್ ಬಳಕೆ ಕುರಿತು ಗಮನಹರಿಸುವಂತೆ ಸೂಚಿಸಿದರು.

ಸಭೆಯಲ್ಲಿ ಎಲ್ಲ ರಾಜ್ಯದ ಸಿಎಂಗಳಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು. ಕೊರೊನಾ ವಿರುದ್ಧ ಕ್ಷಿಪ್ರವಾಗಿ ಸ್ಪಂದಿಸಬೇಕು. ಕೆಂಪು ವಲಯಗಳನ್ನು ಕಿತ್ತಳೆ, ಕಿತ್ತಳೆ ವಲಯವನ್ನು ಹಸಿರು ವಲಯವನ್ನಾಗಿ ಪರಿವರ್ತಿಸಲು ರಾಜ್ಯಗಳು ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.
PM underlined Lockdown has yielded positive results as country has managed to save thousands of lives in the past 1 1/2 months. He added India’s population is comparable to that of the combined population of several countries: PMO https://t.co/gQtqp19s0z
— ANI (@ANI) April 27, 2020
ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಧೈರ್ಯದಿಂದ ಪರಿಸ್ಥಿತಿ ನಡುವೆ ನಿಭಾಯಿಸಬೇಕು. ಆರ್ಥಿಕತೆಯ ಪುನರುಜ್ಜೀವನದ ಜೊತೆಗೆ ಕೊರೊನಾ ವಿರುದ್ಧ ಹೋರಾಟ ಮುಂದುವರಿಸಬೇಕು. ಬೇಸಿಗೆ ಮತ್ತು ಮುಂಗಾರು ಆರಂಭವಾಗಲಿದ್ದು ಈ ನಡುವೆ ಹವಾಮಾನ ಬದಲಾಗಲಿದೆ. ಈ ವೇಳೆ ಹಲವು ರೋಗಗಳು ಉಲ್ಬಣವಾಗಲಿದೆ ಈ ಬಗ್ಗೆ ರಾಜ್ಯ ಸರ್ಕಾರ ಮುಂಜಾಗೃತಿ ಕೈಗೊಳ್ಳಬೇಕು.
PM Modi emphasized on the significance of ensuring that more people download the AarogyaSetu app to bolster the efforts of the country in the battle against COVID-19: PMO on PM's meeting with CMs https://t.co/2npnupDKsU
— ANI (@ANI) April 27, 2020
ನಾವು ಯಾವ ರಾಜ್ಯಗಳ ನಡುವೆಯೂ ತಾರತಮ್ಯ ಮಾಡುವುದಿಲ್ಲ. ಎಲ್ಲ ರಾಜ್ಯಗಳನ್ನು ಕೇಂದ್ರ ಸರ್ಕಾರ ಏಕ ರೂಪದಲ್ಲಿ ನೋಡಲಿದ್ದು ಕೊರೊನಾ ಸಂಕಷ್ಟದಿಂದ ಹೊರ ಬರಲು ಶ್ರಮಿಸೋಣ ಎಂದು ಕರೆ ನೀಡಿದರು.



