ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯ ಸರ್ಕಾರ ಕೂಲಿ ಕಾರ್ಮಿಕರಿಗೆ ದುಪ್ಪಟ್ಟು ದರ ವಸೂಲಿ ನಿರ್ಧರವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಈ ಮೂಲಕ ರಾಜ್ಯ ಸರ್ಕಾರ ಕೆಎಸ್ ಆರ್ ಟಿಸಿಗೆ ದುಪ್ಪಟ್ಟು ದರ ವಸೂಲಿ ಮಾಡದಂತೆ ಸೂಚನೆ ನೀಡಿದೆ.
ಕೆಎಸ್ ಆರ್ ಟಿಸಿ ಹೋಗಿ ಬರುವ ದರ ಸೇರಿಸಿ ಡಬಲ್ ದರವನ್ನು ವಸೂಲಿ ಮಾಡುತ್ತಿತ್ತು. ಈ ಬಗ್ಗೆ ಮಾಧ್ಯಮದಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ರಾಜ್ಯ ಸರ್ಕಾರ ದುಪ್ಪಟ್ಟು ದರ ವಸೂಲಿ ನಿರ್ಧರವನ್ನು ವಾಪಸ್ ಪಡೆಯಲಾಗಿದೆ.
ಈ ಮೂಲಕ ಕೂಲಿ ಕಾರ್ಮಿಕರು ಸಿಂಗಲ್ ಪೇರ್ ದರದಲ್ಲಿಯೇ ಪ್ರಯಾಣ ಮಾಡಲು ಅವಕಾಶ ಕಲ್ಪಿಸುವುದಾಗಿ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಕಾರ್ಮಿಕರು ಸಿಂಗಲ್ ಪೇರ್ ನಲ್ಲಿ ಪ್ರಯಾಣ ಮಾಡಬಹುದಾಗಿದೆ.



