ಡಿವಿಜಿ ಸುದ್ದಿ, ದಾವಣಗೆರೆ : ಜಿಲ್ಲೆಯಲ್ಲಿ ಮೊದಲ ಬಲಿಯಾದ ವೃದ್ಧನ ಅಂತ್ಯಕ್ರಿಯೆಯನ್ನು ಇಂದು ಬೆಳಗಿನಜಾವ 3.45ಕ್ಕೆ ಕೋವಿಡ್ ಮಾರ್ಗಸೂಚಿ ಪ್ರಕಾರ ಅಂತ್ಯಕ್ರಿಯೆ ನಡೆಸಲಾಯಿತು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಲಿನಗರ ನಿವಾಸಿದ 69 ವರ್ಷದ ವೃದ್ಧ ನಿನ್ನೆ ರಾತ್ರಿ 9.00 ಗಂಟೆಗೆ ಮೃತಪಟ್ಟಿದ್ದು, ಮೃತರ ಶವಸಂಸ್ಕಾರವನ್ನು ಬೆಳಗ್ಗೆ 3.45 ಕ್ಕೆ ಜಿಲ್ಲಾಡಳಿತ ಕೋವಿಡ್ ನಿಯಮದ ಪ್ರಕಾರ ನೆರವೇರಿಸಿದೆ. ಶವನ್ನು ಯಾರು ಕೂಡ ಮುಟ್ಟದಂತೆ ಮುಂಜಾಗೃತಿ ವಹಿಸಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ತಿಳಿಸಿದರು.

ವೃದ್ಧ ಏ. 28 ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಏ.29 ರಂದು ವರದಿಯಲ್ಲಿ ಪಾಸಿಟಿವ್ ಬಂದಿತ್ತು. ಆದರೆ, ವೃದ್ಧನಿಗೆ ಉಸಿರಾಟದ ತೊಂದರೆ, ಸಕ್ಕರೆ ಕಾಯಿಲೆ ಇತ್ತು. ಈತ ಕಳೆದ 5 ವರ್ಷದಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮಾಹಿತಿ ನೀಡಿದರು.
ವೃದ್ಧನ ಕುಟುಂಬದ ಐವರು ಸದಸ್ಯರಿಗೆ ಪಾಸಿಟಿವ್ ಬಂದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಟುಂಬದವರು ಯಾರು ಕೂಡ ಅಂತ್ಯ ಕ್ರಿಯೆಯಲ್ಲಿ ಪಾಲ್ಗೊಳ್ಳಲಾರದಂತಹ ಹೀನಾಯ ಸ್ಥಿತಿ ನಿರ್ಮಾಣವಾಗಿದೆ.



