ಡಿವಿಜಿ ಸುದ್ದಿಮ ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ,ಕೆಪಿಸಿಸಿ ಕಾರ್ಯದ್ಯಕ್ಷ ಸಲೀಂ ಅಹಮದ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು, ಮಾಜಿ ಸಚಿವರು,ಕಾಂಗ್ರೆಸ್ ಪಕ್ಷದ ಮುಖಂಡರು ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಕಾವಿು೯ಕರ ಪರ ಬೀದಿಗಿಳಿದು ಹೋರಾಟ ಮಾಡಿದ ಫಲವಾಗಿ ರಾಜ್ಯ ಬಿಜೆಪಿ ಸಕಾ೯ರ ಕಾವಿು೯ಕರು ತಮ್ಮ ಸ್ವಂತ ಸ್ಥಳಕ್ಕೆ ತೆರಳಲು ಉಚಿತ ಬಸ್ ವ್ಯವಸ್ಥೆ ಮಾಡಿದ್ದರೆಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ.ಬಸವರಾಜ್ ಹೇಳಿಕೆ ನೀಡಿದ್ದಾರೆ.
ಕಾವಿು೯ಕರ ಪ್ರಯಾಣದ ವೆಚ್ಚಕ್ಕಾಗಿ ಕೆಪಿಸಿಸಿ ಅಧ್ಯಕ್ಷರು ಕಾಂಗ್ರೆಸ್ ಪಕ್ಷದಿಂದ ಒಂದು ಕೋಟಿ ಚೆಕ್ ನ್ನೂ ಬಸ್ ನಿಲ್ದಾಣಕ್ಕೆ ತೆಗೆದುಕೊಂಡು ಹೋದಾಗ ಬೇರೆ ದಾರಿ ಇಲ್ಲದೆ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ನವರು ಉಚಿತ ಬಸ್ ಪ್ರಯಾಣದ ಘೋಷಣೆ ಮಾಡಿದರು . ಅದಕ್ಕೂ ಮೊದಲು ದುಪ್ಪಟ್ಟು ಬಸ್ ದರ ವಸೂಲಿಗೆ ಇಳಿದಿದ್ದ ಸಕಾ೯ರ ಕಾಂಗ್ರೆಸ್ ಹೋರಾಟಕ್ಕೆ ಮಣಿದಿದೆ .
ರಾಜ್ಯದಲ್ಲಿ 25 ಬಿಜೆಪಿ ಸಂಸದರು ಇದ್ದರೂ ಸಹ ಕಾವಿು೯ಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಕೇಂದ್ರ ಸಕಾ೯ರ ದಿಂದ ಕಾವಿು೯ಕರಿಗಾಗಿ ರೈಲು ವವಸ್ಥೆ ಮಾಡಲು ವಿಫಲರಾಗಿದ್ದಾರೆ.ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಡ ಕಾವಿು೯ಕರ ರೈಲಿನ ಪ್ರಯಾಣ ವೆಚ್ಚವನ್ನು ಭರಿಸಲು ಮುಂದಾಗಿದ್ದಾರೆ. ಈಗಲಾದರೂ ಮೋದಿ ಸಕಾ೯ರ ಬಡವರ , ಕಾವಿು೯ಕರ ಪರ ನಿಲ್ಲಬೇಕಾಗಿದೆ ಎಂದು ಎಚ್ಚರಿಸಿದ್ದಾರೆ.



