Connect with us

Dvgsuddi Kannada | online news portal | Kannada news online

ಎರಡು ದಿನದಲ್ಲಿ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಟೆಸ್ಟಿಂಗ್ ಲ್ಯಾಬ್ : ಭೈರತಿ ಬಸವರಾಜ್

ಪ್ರಮುಖ ಸುದ್ದಿ

ಎರಡು ದಿನದಲ್ಲಿ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಟೆಸ್ಟಿಂಗ್ ಲ್ಯಾಬ್ : ಭೈರತಿ ಬಸವರಾಜ್

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದು, ತುರ್ತಾಗಿ ಕೊರೊನಾ ಟೆಸ್ಟಿಂಗ್ ಲ್ಯಾಬ್ ಅಗತ್ಯವಾಗಿದೆ. ಇಂದು ಎಸ್ ಎಸ್ ಆಸ್ಪತ್ರೆ ಯಲ್ಲಿ ಕೊರೊನಾ ಟೆಸ್ಟಿಂಗ್ ಲ್ಯಾಬ್ ಗೆ ಚಾಲನೆ ನೀಡಲಾಗಿದೆ. ಇನ್ನು ಎರಡು ದಿನದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಟೆಸ್ಟಿಂಗ್ ಲ್ಯಾಬ್ ಕಾರ್ಯಾರಂಭ ಮಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದರು.

ಗ್ರೀನ್ ಝೋನ್ ನಲ್ಲಿದ್ದ ದಾವಣಗೆರೆ ರೆಡ್ ಜೋನ್ ತಲುಪುವ ಹಂತಕ್ಕೆ ಬಂದಿದೆ. ಜಿಲ್ಲೆಯ ಜನರು ಹೆಚ್ಚು ಜಾಗೃತಿ ವಹಿಸಬೇಕಿದೆ. ಸೇಲ್ ಡೌನ್ ಗೆ ಜನರು ಸಹಕಾರ ನೀಡಬೇಕು. ಚೆಕ್ ಪೋಸ್ಟ್ ಗಳಲ್ಲಿ ಇನ್ನಷ್ಟು ಕಟ್ಟು ನಿಟ್ಟಾಗಿ ತಪಾಸಣೆ ನಡೆಸುವಂತೆ ಸೂಚಿಸಿದ್ದೇನೆ.‌ ಇನ್ನು ಎರಡು ದಿನಗಳಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಟೆಸ್ಟಿಂಗ್ ಲ್ಯಾಬ್ ಆರಂಭಿಸಲಾಗುವುದು‌ ಎಂದರು.

ಕೊರೊನಾ ಪಾಸಿಟಿಸ್ ಕೇಸ್ ಇರುವ ಆಸ್ಪತ್ರೆಯಲ್ಲಿ ಬೇರೆಯವರಿಗೆ ಪ್ರವೇಶ ವಿಲ್ಲ. ಅಲ್ಲಿನ ಹೆರಿಗೆ ಆಸ್ಪತ್ರೆಯನ್ನು ಬೇರೆ ಆಸ್ಪತ್ರೆ ಸ್ಥಳಾಂತರಿಸುವಂತೆ ಸೂಚಿಸಿದ್ದೇನೆ.‌ ಆರೋಗ್ಯ ಇಲಾಖೆ ಸಿಬ್ಬಂದಿ ಅನವಶ್ಯಕವಾಗಿ ಅಡಿಯೋ ಮಾಡಿ ಹರಿ ಬಿಟ್ಟರೆ , ಅಂಥವರ ವಿರುದ್ಧ ಕೇಸ್ ದಾಖಲಿಸಲಾಗುವುದು. ಕೊರೊನಾ ಎದುರಿಸಲು ಎಲ್ಲ ಒಗ್ಗಟಿನಿಂದ ಹೋರಾಡಬೇಕಿದೆ‌ ಎಂದು ಕರೆ ನೀಡಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top