ಡಿವಿಜಿ ಸುದ್ದಿ, ದಾವಣಗೆರೆ : ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಹರಿಹರದ ಸಂತ ಅಲೋಶಿಯಸ್ ಕಾಲೇಜಿನ ಆಡಳಿತ ಮಂಡಳಿ, ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರ ಸಹಕಾರದಿಂದ ದಾವಣಗೆರೆಯ ಎಸ್ ಪಿಎಸ್ ನಗರ ಕಂಟೈನ್ಮೆಂಟ್ ಜೋನ್ ಆಹಾರ ಕಿಟ್ ವಿತರಿಸಿದೆ.
ಸುಮಾರ 800 ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಲಾಯಿತು. ಈ ಸತ್ಕಾರ್ಯದಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಹಾಗೂ ಗಾಂಧಿ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಇಮ್ರಾನ್ ಮತ್ತು ಅವರ ಸಿಬ್ಬಂದಿ ವರ್ಗ ಸಹಕಾರ ನೀಡಿದರು.
ಇದುವರೆಗೂ ಹರಿಹರ ಮತ್ತು ದಾವಣಗೆರೆಯಲ್ಲಿ ಇರುವ ವಲಸಿಗರು, ನಿರಾಶ್ರಿತರು, ಬಡವರು ಮತ್ತು ಅಂಗವಿಕಲರು ಮುಂತಾದ ಅಶಕ್ತ ವರ್ಗದವರಿಗೆ ಸುಮಾರು 2,200 ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಸಾಮಗ್ರಿ ಕಿಟ್ ಗಳನ್ನು ವಿತರಿಸಲಾಗಿದೆ. ಈ ಕಾರ್ಯ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಸಹ ಕೈಜೋಡಿಸಿದ್ದಾರೆ.



