Connect with us

Dvgsuddi Kannada | online news portal | Kannada news online

ಭತ್ತ ಮಾರಾಟಕ್ಕೆ ಗಡವು ನೀಡುವುದು ಸರಿಯಲ್ಲ: ಕನಿಷ್ಠ 2,600 ಬೆಂಬಲ ಬೆಲೆ ನೀಡಿ: ಬಸವರಾಜು ಶಿವಗಂಗಾ

ಪ್ರಮುಖ ಸುದ್ದಿ

ಭತ್ತ ಮಾರಾಟಕ್ಕೆ ಗಡವು ನೀಡುವುದು ಸರಿಯಲ್ಲ: ಕನಿಷ್ಠ 2,600 ಬೆಂಬಲ ಬೆಲೆ ನೀಡಿ: ಬಸವರಾಜು ಶಿವಗಂಗಾ

ಡಿವಿಜಿ ಸುದ್ದಿ, ದಾವಣಗೆರೆ : ಭತ್ತ ಖರೀದಿಗೆ ಮೇ 15ರೊಳಗೆ ಹೆಸರು ನೊಂದಸಿಕೊಳ್ಳಿ ಎಂದು ಆದೇಶ ಹೊರಡಿಸಿರುವುದು ಎಷ್ಟು ಸೂಕ್ತ ಎಂದು ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕ ಅಧ್ಯಕ್ಷರಾದ ಬಸವರಾಜು ವಿ ಶಿವಗಂಗಾ ಪ್ರಶ್ನೆ ಮಾಡಿದ್ದಾರೆ.

shivaganga basavarju

ಜಿಲ್ಲೆಯಲ್ಲಿ ಸರಿ ಸುಮಾರು 1 ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ, ಜಿಲ್ಲೆಯ ಅಚ್ಚುಕಟ್ಟು ಪ್ರದೇಶದ ಕೊನೆ ಭಾಗದ ರೈತರ ಜಮೀನುಗಳಿಗೆ ನೀರು ಹರಿದಿರುವುದು ತಡವಾಗಿದೆ. ತರಾತುರಿಯಲ್ಲಿ ಭತ್ತ ಖರೀದಿ ಕೇಂದ್ರ ಆರಂಭ ಮಾಡಲಾಗುತ್ತಿದ್ದು, ಭತ್ತ ಬೆಳೆಗಾರರ ಮೇಲೆ ಒತ್ತಡ ಹೇರುವುದು ಬೇಡ. ಲಾಕ್ ಡೌನ್ ನಿಂದ ರೈತರ ಕೈಯಲ್ಲಿ ಹಣವಿಲ್ಲ, ಭತ್ತ ಕೊಯ್ಲಿಗೂ ಸಹ ಹಣವಿಲ್ಲದೆ ಪರದಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಮೇ 15 ರೊಳಗೆ ರೈತರು ಹೆಸರು ನೊಂದಾಯಿಸಿ ಎಂದು ಒತ್ತಡ ಹೇರುವುದು ಸರಿಯಲ್ಲ ಎಂದಿದ್ದಾರೆ.

ಇನ್ನೂ ಕ್ವಿಂಟಲ್‍ಗೆ 1,810 ರೂಪಾಯಿ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರದ 200 ರೂಪಾಯಿ ಸೇರಿಸಿ 2010 ರೂಪಾಯಿ ದರ ನಿಗಧಿ ಮಾಡಲಾಗಿದೆ. ಭತ್ತಕ್ಕೆ ಕನಿಷ್ಠ 2600 ರೂಪಾಯಿ ದರ ನಿಗಧಿ ಮಾಡಿ ಖರೀದಿ ಮಾಡಲಿ ಎಂದು ಆಗ್ರಹಿಸಿದ್ದಾರೆ. ಇನ್ನೂ ತೂಕ ಮತ್ತು ಅಳತೆಯಲ್ಲಿ ಮೋಸ ನಡೆಯುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿ, ಅನ್ನದಾತರಿಗೆ ಮೊಸವಾದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top