ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಇಂದು ಮಧ್ಯ ರಾತ್ರಿಯಿಂದ ಮೇ 19 ರ ಮಧ್ಯರಾತ್ರಿಯವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.

ಮೂರನೇ ಹಂತ ಲಾಕ್ ಡೌನ್ ಇಂದು ಮಧ್ಯ ರಾತ್ರಿ ಮುಕ್ತಯವಾಗಲಿದೆ. ಕೇಂದ್ರ ಸರ್ಕಾರ ಮತ್ತೆ ನಾಲ್ಕನೇ ಹಂತೆ ಲಾಕ್ ಡೌನ್ ಮೇ.31 ವರೆಗೆ ವಿಸ್ತರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಗ ಸೂಚಿ ಬರುವವರೆಗೂ ಜಿಲ್ಲಾಧಿಕಾರಿಗಳು ಮೇ. 19 ವರೆಗೆ ನಿಷೇಧಾಜ್ಞೆ ಅವಧಿಯಲ್ಲಿ ವಿಸ್ತರಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ 19 ರ ಶುಶ್ರೂಷಾ ಉದ್ದೇಶಗಳನ್ನು ಮತ್ತು ಶಾಸನಬದ್ದ ಹಾಗೂ ನಿಯಂತ್ರಣ ಪ್ರಕಾರ್ಯಗಳನ್ನು ಹೊರತುಪಡಿಸಿ 05 ವ್ಯಕ್ತಿಗಳಿಗಿಂತ ಹೆಚ್ಚಿನ ಎಲ್ಲಾ ಸಮೂಹ ಒಗ್ಗೂಡುವಿಕೆಯನ್ನು ನಿಷೇಧಿಸಲಾಗಿದೆ.
ಎಲ್ಲಾ ಧರ್ಮಗಳ ಪ್ರಾರ್ಥನಾ ಒಗ್ಗೂಡುವಿಕೆ ಮತ್ತು ಹಬ್ಬಗಳ ಒಗ್ಗೂಡುವಿಕೆಯನ್ನು ಸಹ ನಿಲ್ಲಿಸತಕ್ಕದ್ದು. ಈ ಅವಧಿಯಲ್ಲಿ 65 ವರ್ಷಕ್ಕೂ ಹೆಚ್ಚಿನ ವಯಸ್ಸಿನವರು, ಮಾನಸಿಕ ಹಾಗೂ ಹೆಚ್ಚಿನ ಕಾಯಿಲೆಯಿಂದ ಬಳಲುತ್ತಿರುವವರು, ಗರ್ಭಿಣಿಯರು, 10 ವರ್ಷದ ಒಳಗಿನ ಮಕ್ಕಳು ಆರೋಗ್ಯ/ಚಿಕಿತ್ಸೆ ಉದ್ದೇಶಕ್ಕೆ ಹೊರತುಪಡಿಸಿ ಬೇರೆ ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರುವಂತಿಲ್ಲ.
ಈ ಅವಧಿಯಲ್ಲಿ ರಾತ್ರಿ 7 ರಿಂದ ಬೆಳಿಗ್ಗೆ 7 ಗಂಟೆವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರ ಚಲನ-ವಲನವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ (ರಾತ್ರಿ 7 ರಿಂದ ಮುಂಜಾನೆ 7 ವರೆಗೆ ಕರ್ಫ್ಯೂ ಇರುತ್ತದೆ). ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಭಾರತೀಯ ದಂಡ ಸಂಹಿತೆಯ ಕಲಂ 188 ಮತ್ತು 270 ಹಾಘೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.



