Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ; ಇಂದು ಒಂದೇ ದಿನ 149 ಕೊರೊನಾ ಪಾಸಿಟಿವ್ ಪತ್ತೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ; ಇಂದು ಒಂದೇ ದಿನ 149 ಕೊರೊನಾ ಪಾಸಿಟಿವ್ ಪತ್ತೆ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 149 ಕೊರೊನಾ ಪಾಸಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 1395ಕ್ಕೆ ಏರಿಕೆಯಾಗಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ 22 ಪ್ರಕಣಗಳು ಪತ್ತೆಯಾಗಿದ್ದು, ಬೆಳಗಿನ ಬುಲೆಟಿನ್ ನಲ್ಲಿ 127 ಪ್ರಕರಣಗಳು ಪತ್ತೆಯಾಗಿದ್ದವು. ಈ ಮೂಲಕ ರಾಜ್ಯದಲ್ಲಿ ಒಂದೇ ದಿನ 149  ಸೋಂಕಿನ ಪ್ರಕರಣ ಪತ್ತೆಯಾದಂತಾಗಿದೆ.

ರಾಜ್ಯದಲ್ಲಿ ಈವರೆಗೂ 40 ಮಂದಿ ಸಾವಿಗೀಡಾಗಿದ್ದು, 543 ಮಂದಿ ಗುಣಮುಖರಾಗಿದ್ದಾರೆ. 811 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಳ್ಳಾರಿ (61 ವರ್ಷ), ವಿಜಯಪುರ (65 ವರ್ಷ) ಹಾಗೂ ಬೆಂಗಳೂರಿನ (54 ವರ್ಷ) ವ್ಯಕ್ತಿ ಸಾವಿಗೀಡಾಗಿದ್ದಾರೆ.

ಮಂಡ್ಯದಲ್ಲಿ 71 ಪ್ರಕರಣಗಳು, ದಾವಣಗೆರೆ 22 ಪ್ರಕರಣಗಳು, ಶಿವಮೊಗ್ಗದಲ್ಲಿ 12, ಕಲಬುರ್ಗಿಯಲ್ಲಿ 13, ಉತ್ತರ ಕನ್ನಡದಲ್ಲಿ ಮತ್ತು ಉಡುಪಿಯಲ್ಲಿ ತಲಾ 4, ಹಾಸನದಲ್ಲಿ 3, ಬಾಗಲಕೋಟೆಯಲ್ಲಿ 5, ಬೆಂಗಳೂರಿನಲ್ಲಿ 6 ಮಂದಿಗೆ ಸೋಂಕು, ರಾಯಚೂರು ಮತ್ತು ಬೀದರ್‌ನಲ್ಲಿ ತಲಾ 1 ಪ್ರಕರಣ ಹಾಗೂ ಹಸಿರು ವಲಯದಲ್ಲಿದ್ದ ಚಿಕ್ಕಮಗಳೂರಿನಲ್ಲಿ 5 ಪ್ರಕರಣಗಳು ದಾಖಲಾಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top