ಡಿವಿಜಿ ಸುದ್ದಿ, ದಾವಣಗೆರೆ: ಲಾಕ್ ಡೌನ್ ಹಿನ್ನೆಲೆ ಕಳೆದ ಒಂದುವರೆ ತಿಂಗಳಿಂದ ಸೇವೆ ನಿಲ್ಲಿಸಿದ್ದ ಕೆಎಸ್ ಆರ್ ಟಿಸಿ ಬಸ್ ಗಳು ಇಂದು ರಸ್ತೆಗೆ ಇಳಿದ್ದವು. ದಾವಣಗೆರೆ ವಿಭಾಗದ ಮೂರು ಘಟಕದಿಂದ 50 ಬಸ್ ಗಳು ಕಾರ್ಯಾಚರಣೆ ಮಾಡಿವೆ.
ಇಂದು ಬೆಳಿಗ್ಗೆ 07 ಗಂಟೆಯಿಂದ ರಾತ್ರಿ 07 ರವರೆಗೆ ಸರ್ಕಾರದ ಆದೇಶದಂತೆ ಸೋಂಕು ಹರಡದಂತೆ ಕ್ರಮಗಳನ್ನು ಕೈಗೊಂಡು ಕೆಎಸ್ಆರ್ಟಿಸಿ ವಾಹನಗಳ ಕಾರ್ಯಾಚರಣೆ ಮಾಡಲಾಯಿತು.
ವಿಭಾಗದ 03 ಘಟಕಗಳಿಂದ ಒಟ್ಟು 50 ವಾಹನಗಳನ್ನು ಕಾರ್ಯಾಚರಣೆ ಮಾಡಿದದ್ದು, ಮೊದಲ ಹಂತದಲ್ಲಿ ದಾವಣಗೆರೆಯಿಂದ ಬೆಂಗಳೂರು, ಶಿವಮೊಗ್ಗ, ಚಿತ್ರದುರ್ಗ, ಹರಪನಹಳ್ಳಿ, ಹೊಸಪೇಟೆ, ಹುಬ್ಬಳ್ಳಿ ಹಾಗೂ ದಾವಣಗೆರೆ ನಗರ ಸಾರಿಗೆ ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡಲು ಉದ್ದೇಶಿಲಾಗಿರುತ್ತದೆ.
ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮತ್ತು ಸಹ ಪ್ರಯಾಣಿಕರೊಂದಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಥರ್ಮಲ್ ಸ್ಕ್ಯಾನರ್ ತಪಾಸಣೆಗೆ ಒಳಪಡಿಸಲಾಗುವುದು. ಆದ್ದರಿಂದ ಚಾಲಕ ಹಾಗೂ ನಿರ್ವಾಹಕರೊಂದಿಗೆ ಸಹಕರಿಸಬೇಕು. ಗುರುತಿನ ಚೀಟಿಯೊಂದಿಗೆ ಪ್ರಯಾಣಿಸಬೇಕು. ಮತ್ತು ಬಸ್ಸು ನಿಲ್ದಾಣದಲ್ಲಿ ಉಗುಳಬಾರದು ಎಂದು ದಾವಣಗೆರೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಹೆಬ್ಬಾರ್ ತಿಳಿಸಿದ್ದಾರೆ.