ಡಿವಿಜಿ ಸುದ್ದಿ, ಹಾವೇರಿ: ನಗರದ ಎಪಿಎಂಸಿ ಆವರಣದ ಸಿದ್ಧಲಿಂಗೇಶ್ವರ ಟ್ರೇಡರ್ಸ್ ಗೋದಾಮಿನ ಮೇಲೆ ದಾವಣಗೆರೆಯ ಐಜಿ ಸ್ಕ್ವಾಡ್ ಮತ್ತು ಹಾವೇರಿ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿದದ್ದು, ಅಕ್ರಮವಾಗಿ ದಾಸ್ತಾನು ಮಾಡಿದ್ದ 254 ಕ್ವಿಂಟಲ್ ಅನ್ನ ಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಒಟ್ಟು 3.80 ಲಕ್ಷ ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಐಜಿ ಸ್ಕ್ವಾಡ್ ಪಿಎಸ್ಐ ಸಿದ್ದಾರೂಢ ಬಡಿಗೇರ ಮತ್ತು ಆಹಾರ ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಿಕೆ ನೇತೃತ್ವದಲ್ಲಿ ದಾಳಿ ನಡೆದಿದೆ. ಗೋದಾಮಿನ ಮಾಲೀಕ ಶಿವಯೋಗಿ ಪಟ್ಟಣಶೆಟ್ಟಿ, ಸಹಾಯಕ ರವಿ ನಾಗನೂರ ಹಾಗೂ ಲಾರಿ ಚಾಲಕ ಶಿವ ಕರುಗಲ್ ವಶಕ್ಕೆ ಪಡೆಯಲಾಗಿದೆ. ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



