Connect with us

Dvgsuddi Kannada | online news portal | Kannada news online

ಮೇ 26 ರಿಂದ ದೇವಸ್ಥಾನಗಳಲ್ಲಿ ಆನ್ ಲೈನ್ ಪೂಜೆಗೆ ಅವಕಾಶ: ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

ಪ್ರಮುಖ ಸುದ್ದಿ

ಮೇ 26 ರಿಂದ ದೇವಸ್ಥಾನಗಳಲ್ಲಿ ಆನ್ ಲೈನ್ ಪೂಜೆಗೆ ಅವಕಾಶ: ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

 ಡಿವಿಜಿ ಸುದ್ದಿ, ಬೆಂಗಳೂರು:  ಕೊರೊನಾ ವೈರಸ್ ಲಾಕ್ ಡೌನ್ ನಿಂದ  ಬಂದ್ ಆಗಿದ್ದ ದೇವಸ್ಥಾನಗಳಲ್ಲಿ  ಮೇ 26 ರಿಂದ ಆನ್‍ಲೈನ್ ಸೇವೆ ಪ್ರಾರಂಭ ಆಗಲಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

kota shrinivas pojari

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಆನ್‍ಲೈನ್‍ನಲ್ಲಿ ಭಕ್ತರು ದೇವಸ್ಥಾನಗಳಿಗೆ ಹಣ ಪಾವತಿ ಮಾಡಿ ಪೂಜೆ ಮಾಡಿಸಲು ಅವಕಾಶ ನೀಡಲಾಗುತ್ತದೆ. 15ರಿಂದ 20 ಸೇವೆಗಳಿಗೆ ಅವಕಾಶ ಕೊಡಲಾಗುತ್ತದೆ. ಆನ್‍ಲೈನ್‍ನಲ್ಲಿ ಭಕ್ತರು ಹಣ ಪಾವತಿ ಮಾಡಬೇಕು, ಅವರ ಹೆಸರಿನಲ್ಲಿ ಪೂಜೆ ಮಾಡಿ ಪ್ರಸಾದ ಭಕ್ತರ ಮನೆಗೇ ಕಳುಹಿಸುತ್ತೇವೆ. ದೇವಾಲಯದ ಒಳಗೆ  ಯಾರನ್ನು ಬಿಡುವುದಿಲ್ಲ. ಹಣ ಪಾವತಿಸಿದ ಭಕ್ತರು ಹೇಳಿದವರ ಹೆಸರಲ್ಲಿ ಪೂಜೆ ಸಲ್ಲಿಸಲಾಗುತ್ತದೆ ಎಂದು  ಮಾಹಿತಿ ನೀಡಿದರು.

ಪ್ರಥಮ ಬಾರಿಗೆ 50 ದೇವಾಲಯದಲ್ಲಿ ಆನ್‍ಲೈನ್ ಸೇವೆಗೆ ಅವಕಾಶ ನೀಡಲಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾ ಪರಮೇಶ್ವರಿ, ಮೈಸೂರು ಚಾಮುಂಡೇಶ್ವರಿ, ಬನಶಂಕರಿ ದೇವಾಲಯ, ನಂಜನಗೂಡು ನಂಜುಂಡೇಶ್ವರ ದೇವಲಯ ಸೇರಿ ಒಟ್ಟು 50 ದೇವಾಲಯಗಳಲ್ಲಿ ಆನ್‍ಲೈನ್ ಸೇವೆ ಪ್ರಾರಂಭವಾಗುತ್ತದೆ. ಸಿಎಂ ಒಪ್ಪಿಗೆ ಕೊಟ್ಟ ಕೂಡಲೇ ಆನ್‍ಲೈನ್ ಸೇವೆ ಪ್ರಾರಂಭ ಮಾಡ್ತೀವಿ ಎಂದು ಸಚಿವರು ತಿಳಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top