ಡಿವಿಜಿ ಸುದ್ದಿ, ದಾವಣಗೆರೆ: ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವ ಆರ್.ಅಶೋಕ್ ಇವರು ಮೇ 27 ರಂದು ದಾವಣಗೆರ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಿಗ್ಗೆ 6.30 ಕ್ಕೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 11 ಗಂಟೆಗೆ ದಾವಣಗೆರೆಗೆ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ಮಧ್ಯಾಹ್ನ 1.45 ಗಂಟೆಗೆ ದಾವಣಗೆರೆಯಿಂದ ರಸ್ತೆ ಮೂಲಕ ಹೊರಟು ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗ ತಲುಪುವರು ಎಂದು ಪ್ರಕಟಣೆ ತಿಳಿಸಿದೆ.



