ಡಿವಿಜಿ ಸುದ್ದಿ, ಬೆಂಗಳೂರು: ಲಾಕ್ ಡೌನ್ ಸಡಿಲ ಹಿನ್ನೆಲೆ ವಿಮಾನದ ಮೂಲಕ ರಾಜ್ಯಕ್ಕೆ ಬರುವ ಮಹಾರಾಷ್ಟ್ರ , ಗುಜರಾತ್, ತಮಿಳುನಾಡು, ಮಧ್ಯಪ್ರದೇಶ ಮತ್ತು ರಾಜಸ್ಥಾನದ ಜನರು ರಾಜ್ಯ ಪ್ರವೇಶಿಸದಂತೆ ನಿರ್ಬಂಧ ಹೇರಲು ಸಚಿವ ಸಂಪುಟ ತೀರ್ಮಾನಿಸಿದೆ.
ಈ ಐದು ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಸೋಂಕು ಹರಡುವುದನ್ನು ತಡೆಯಲು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿಮಾನದಲ್ಲಿ ಮಾತ್ರವಲ್ಲದೆ ಗುಜರಾತ್, ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯದ ಜನರು ರಸ್ತೆ ಮೂಲಕವೂ ರಾಜ್ಯಕ್ಕೆ ಪ್ರವೇಶ ನಿಷೇಧಿಸಲಾಗಿದೆ.



