ಡಿವಿಜಿ ಸುದ್ದಿ, ಬೆಂಗಳೂರು: ಸಾರ್ವಜನಿಕರ ಬೇಡಿಕೆ ಹಿನ್ನೆಲೆ ನಾಳೆ ಭಾನುವಾರ ಸಂಪೂರ್ಣ ಲಾಕ್ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಭಾನುವಾರ ಲಾಕ್ ಡೌನ್ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು. ಹೀಗಾಗಿ ಭಾನುವಾರದ ಸಂಪೂರ್ಣ ಲಾಕ್ ಡೌನ್ ನಿಯಮವನ್ನು ವಾಪಸ್ ಪಡೆದಿದ್ದಾರೆ. ಸಾರಿಗೆ ಸೇರಿದಂತೆ ಎಲ್ಲ ದೈನಂದಿನ ಚಟುವಟಿಕೆಗಳು ಎಂದಿನಂತೆ ನಡೆಯಲಿವೆ ಎಂದು ಅವರು ಹೇಳಿದ್ದಾರೆ.
ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವಿಕೆ ತಡೆಯುವ ಉದ್ದೇಶದಿಂದ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದೆ. ಈ ಹಂತದಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಭಾನುವಾರದಂದು ಮಾತ್ರ ಸಂಪೂರ್ಣ ಲಾಕ್ಡೌನ್ ಇರಲಿದೆ ಎಂದು ಈ ಹಿಂದೆ ಆದೇಶ ಹೊರಡಿಸಲಾಗಿತ್ತು. ಆದರೆ, ಈಗ ಸರ್ಕಾರ ಆದೇಶ ವಾಪಸ್ ಪಡೆದು ಭಾಬುವಾರ ಎಂದಿನಂತೆ ದೈನಂದಿನ ಚಟುವಟಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.



