ಜೂನ್ 04 ರಿಂದ ಗುತ್ತಿಗೆ, ಹೊರಗುತ್ತಿಗೆ ವೈದ್ಯಕೀಯ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ಬೆಂಗಳೂರು: ನಮಗೆ ಚಪ್ಪಾಳೆ ಬೇಡ ಸೌಲಭ್ಯ ನೀಡಿ ಎಂಬ ಘೋಷವಾಕ್ಯದೊಂದಿಗೆ  ಕೊರೊನಾ ವಾರಿಯರ್ಸ್‍ಗಳಾದ ಗುತ್ತಿಗೆ, ಹೊರ ಗುತ್ತಿಗೆ ವೈದ್ಯಕೀಯ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ  ಕರೆನೀಡಿದ್ದಾರೆ.

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘ,  ಭಾರತೀಯ ಮಜ್ದಾರ್ ಸಂಘ  ಸಹಯೋಗದೊಂದಿಗೆ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಜೂನ್ 4 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಕರೆ ನೀಡಲಾಗಿದೆ. ರಾಜ್ಯದಲ್ಲಿ ಕೊರೊನಾ ಸಮಯದಲ್ಲೇ ಮುಷ್ಕರಕ್ಕೆ ಮುಂದಾಗಿರುವುದು ಸರ್ಕಾರಕ್ಕೆ ಮತ್ತೊಂದು ಸವಾಲು ಎದುರಾಗಿದೆ.

ಕೊರೊನಾ ಸಮಯದಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಕೆಲವು ಬೇಡಿಕೆಗಳನ್ನು ನೀಡಿ ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ವಿಚಾರವಾಗಿ ಮೇ 20ರಂದು ಆರೋಗ್ಯ ಸಚಿವ ಶ್ರೀರಾಮುಲು ಅವರ ನೇತೃತ್ವದಲ್ಲಿ ಸಭೆ ಕೂಡ ನಡೆದಿತ್ತು. ಈ ಬಗ್ಗೆ ಸಮಿತಿ ರಚನೆಯ ಮಾಡಿ ಬೇಡಿಕೆಗಳನ್ನು ಪರಿಶೀಲನೆಯ ಮಾಡುವ ಭರವಸೆ ನೀಡಿಲಾಗಿತ್ತು. ಆದರೆ ಈಗ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮುಷ್ಕರ ಮಾಡಲು ಸಂಘ ತೀರ್ಮಾನಿಸಿದೆ.

srike 1 763x600 1

ನಮ್ಮ ರಾಜ್ಯದಲ್ಲಿ ವೈದ್ಯಕೀಯ ಇಲಾಖೆಯಲ್ಲಿ 23 ಸಾವಿರಕ್ಕೂ ಅಧಿಕ ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಇದರಲ್ಲಿ ಡಾಕ್ಟರ್, ಸ್ಟಾಫ್ ನರ್ಸ್, ಅಂಬುಲೆನ್ಸ್ ಚಾಲಕರು ಸೇರಿ 180 ವಿವಿಧ ಹುದ್ದೆಯಲ್ಲಿ ಈ ನೌಕರರು ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ಒಟ್ಟು 1,500 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.

ನೌಕರರ ಬೇಡಿಕೆಯೇನು?
1. ಕಡಿಮೆ ವೇತನ
2. ಪರಿಷ್ಕೃತ ವೇತನ ಇಲ್ಲ
3. ಭತ್ಯೆಗಳು ಇಲ್ಲ
4. ವೈದ್ಯಕೀಯ ಸೌಲಭ್ಯವಿಲ್ಲ
5. ರಜೆಗಳು ಇಲ್ಲ (ವರ್ಷಕ್ಕೆ 10 ಮಾತ್ರ)
6. ಸೇವಾ ಭದ್ರತೆ ಇಲ್ಲ
7. ವರ್ಗಾವಣೆ ಇಲ್ಲ
8. ಬ್ಯಾಂಕಿನಲ್ಲಿ ಸಾಲ ನೀಡುವುದಿಲ್ಲ
9. ಪದೋನ್ನತಿ ಇಲ್ಲ
10. ಹೆಚ್‍ಆರ್ ಪಾಲಿಸಿ ಇಲ್ಲ
11. ವಿಮೆ ಇಲ್ಲ
12. ಡೆತ್ ಬೆನಿಫಿಟ್ ಇಲ್ಲ
13. ಸಮಾನ ಕೆಲಸಕ್ಕೆ ಸಮಾನ ವೇತನವಿಲ್ಲ
14. ಮಹಿಳಾ ಸಿಬ್ಬಂದಿಗೆ ಕುಟುಂಬ ಶಸ್ತ್ರಚಿಕಿತ್ಸೆಗೆ ರಜೆ ಇಲ್ಲ
15. ಕಡಿಮೆ ವೇತನವಿದ್ದರೂ ಸರ್ಕಾರಿ ಕೆಲಸ ಎಂದು ಬಿಪಿಎಲ್ ಕಾರ್ಡ್ ನೀಡುವುದಿಲ್ಲ
16. ಹೊರಗುತ್ತಿಗೆ ಪದ್ದತಿ ಕೈಬಿಡಬೇಕು

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *