ಡಿವಿಜಿ ಸುದ್ದಿ, ದಾವಣಗೆರೆ : ರಾಷ್ಟ್ರೀಯ ಹೆದ್ದಾರಿಯ(NH4) ಕಲ್ಪನಹಳ್ಳಿ, ಮಲ್ಲಶೆಟ್ಟಿಹಳ್ಳಿ, ಹೊನ್ನೂರು, ಲಕ್ಕಮುತ್ತೇನಹಳ್ಳಿಯಲ್ಲಿ ವಿಶಾಲವಾದ ಅಂಡರ್ ಪಾಸ್ ನಿರ್ಮಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಕಾಮಗಾರಿ ಸ್ಥಗಿತಗೊಳಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಗ್ರಾಮಸ್ಥರ ಮನವೊಲಿಸಿದರು.

ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ಸಂಬಂಧ ಹೊಸದಾಗಿ ಅಂಡರ್ಪಾಸ್ ನಿರ್ಮಿಸುವ ಕುರಿತಂತೆ ಸಾರ್ವಜನಿಕರು ಕಾಮಗಾರಿ ಸ್ಥಗಿತಗೊಳಿಸಿದ್ದರು. ಗ್ರಾಮಗಳಿಗೆ ವಿಶಾಲವಾದ ಅಂಡರ್ಪಾಸ್ ನಿರ್ಮಿಸುವಂತೆ ಒತ್ತಾಯಿಸಿದ್ದರು.
ಡಿಸಿ ಮತ್ತು ಎಸ್ಪಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಗಳಂತೆ ಈ ಹಂತದಲ್ಲಿ ಗ್ರಾಮಸ್ಥರ ಬೇಡಿಕೆಗೆ ತಕ್ಕಂತೆ ವಿಶಾಲವಾದ ಅಂಡರ್ಪಾಸ್ ನಿರ್ಮಿಸಲು ಅವಕಾಶವಿಲ್ಲವೆಂಬ ವಿಷಯನ್ನು ಗ್ರಾಮಸ್ಥರಿಗೆ ಮನವೊಲಿಸಿದರು. ಕಲ್ಪನಹಳ್ಳಿ, ಮಲ್ಲಶೆಟ್ಟಿಹಳ್ಳಿ ಗ್ರಾಮಗಳಲ್ಲಿ ಕಾಮಗಾರಿಯನ್ನು ಕೂಡಲೇ ಮುಕ್ತಾಯಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು
ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಗುತ್ತಿಗೆದಾರರು, ಕಂದಾಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.



