ದಾವಣಗೆರೆ: ಸಿಜೆ ಆಸ್ಪತ್ರೆಯ ಚರಂಡಿ ನಿಧಾನಗತಿ ಕಾಮಗಾರಿ; ಪಾಲಿಕೆ ಸದಸ್ಯರಿಂದ  ತರಾಟೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ನಗರದ ಸಿಜೆ ಆಸ್ಪತ್ರೆ ಹಿಂಭಾಗದ ರಸ್ತೆ ಯಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಪಾಲಿಕೆ  ಕಾಂಗ್ರೆಸ್ ಸದಸ್ಯರು ಗುತ್ತಿಗೆದಾರರಿಗೆ ತರಾಟೆ ತೆಗೆದುಕೊಂಡರು.

14ನೇ ಹಣಕಾಸು ಯೋಜನೆಯಡಿ 25 ಲಕ್ಷ ಮೊತ್ತದ ಒಳಚರಂಡಿ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಟೆಂಡರ್ ಕಾಲಮಿತಿ ಅವಧಿ ಮುಗಿದಿದ್ದರೂ ಸಹ ಕೆಲಸ ಮುಗಿಸಿಲ್ಲ.  ಜನಸಾಮಾನ್ಯರಿಗೆ  ತೊಂದರೆ ನೀಡುತ್ತಿರುವುದರ ವಿರುದ್ಧ ಕಾಂಗ್ರೆಸ್ ಪಾಲಿಕೆ ಸದಸ್ಯರುಗಳು ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆಸಿ ತರಾಟೆ ತೆಗೆದುಕೊಂಡರು. ಆದಷ್ಟು ಬೇಗ ಕೆಲಸ ಮುಗಿಸಿ ಕೊಡುವುದಾಗಿ ಗುತ್ತಿಗೆದಾರರು ತಿಳಿಸಿದರು.

ಸಂದರ್ಭದಲ್ಲಿ ಪಾಲಿಕೆ ವಿರೋಧಪಕ್ಷದ ನಾಯಕ ಎ. ನಾಗರಾಜ್, ಸದಸ್ಯರುಗಳಾದ ಗಡಿ ಗುಡಾಳ್ ಮಂಜುನಾಥ್, ದೇವರಮನೆ ಶಿವಕುಮಾರ್, ಕೆ ಚಮನ್ ಸಾಬ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ .ಕೆ ಶೆಟ್ಟಿ, ಸಾಮಾಜಿಕ ಜಾಲತಾಣದ ಕೆ.ಎಲ್.ಹರೀಶ್ ಬಸಾಪುರ, ಮಾಜಿ ನಗರಸಭಾ ಸದಸ್ಯ ಎಸ್. ಮಲ್ಲಿಕಾರ್ಜುನ್, ಏನ್.ಎಸ್.ಯು. ಐ ನ ಮುಜಾಹಿದ್ ಮುಂತಾದವರು ಉಪಸ್ಥಿತರಿದ್ದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *