Connect with us

Dvgsuddi Kannada | online news portal | Kannada news online

ಹರಿಹರ: ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Home

ಹರಿಹರ: ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಡಿವಿಜಿ ಸುದ್ದಿ, ಹರಿಹರ:  ಸಂತ ಅಲೋಶಿಯಸ್ ಕಾಲೇಜಿನಲ್ಲಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿಗಳನ್ನು ನೆಡಲಾಯಿತು.

ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರವಿ ಕುಮಾರ್ ಅವರ ತಮ್ಮ ಹುಟ್ಟುಹಬ್ಬವನ್ನು ಸಸಿ ನೆಡುವ ಮೂಲಕ ಆಚರಿಸಿದರು.

ಕಾರ್ಯಕ್ರಮ ನಂತರ  ಕಾಲೇಜಿನ ಮುಖ್ಯಸ್ಥ ಫಾದರ್ ಎರಿಕ್ ಮತಾಯಸ್ ಮಾತನಾಡಿ,  ಮನುಷ್ಯ ಭೂಮಿ ಮೇಲೆ ಉಳಿಯಬೇಕಾದರೆ, ಪರಿಸರ ಅತ್ಯಗತ್ಯ. ಪರಿಸರ ಕಾಳಜಿ ಪ್ರತಿಯೊಬ್ಬರ ಮೇಲಿದೆ. ನಾವು ಪರಿಸರಕ್ಕೆ ಏನು ಕೊಡದಿದ್ದರೂ, ಪರವಾಗಿಲ್ಲ. ನಾಶವನ್ನು ಮಾತ್ರ ಮಾಡಬಾರದು ಎಂದು ಕರೆ ನೀಡಿದರು.ಹರಿಹರ  ಗ್ರಾಮೀಣ ಭಾಗದಲ್ಲಿನ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿರುವ ರವಿಕುಮಾರ್ ಅವರು  ಸಾರ್ಥಕ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ರವಿಕುಮಾರ್,  ಸಂತ ಅಲೋಶಿಯಸ್ ಕಾಲೇಜು ಕೊರೋನಾ ಮಹಾಮಾರಿ ಇಂದ ತತ್ತರಿಸಿರುವ ಹರಿಹರ ತಾಲೂಕಿನಲ್ಲಿ ಬಡವರಿಗೆ ಆಹಾರದ ಕಿಟ್  ಗಳನ್ನು ವಿತರಿಸುವುದು ಶ್ಲಾಘನೀಯ. ಇದರ ಜೊತೆಗೆ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಡುವ ಮೂಲಕ  ಸಾಮಾಜಿಕ ಕಾಳಜಿ ಮೆರೆದ ಕಾಲೇಜಿನ ಮುಖ್ಯಸ್ಥರಿಗೆ  ಧನ್ಯವಾದಗಳು ಎಂದರು.

harihara college 2

ಈ ಸಂದರ್ಭದಲ್ಲಿ ಕಾಲೇಜಿನ ಮುಖ್ಯಸ್ಥರಾದ ಏರಿಕ್ ಮತಾಯಸ್, ಫಾದರ್ ರಾಯಪ್ಪ, ಪ್ರಾಂಶುಪಾಲರಾದ ಸನ್ನಿ ಗುಡಿನೋ, ಉಪಪ್ರಾಂಶುಪಾಲ ಪುಷ್ಪಲತಾ ಅರಸ್ ಮತ್ತು ಪ್ರಿನ್ಸಿ ಫ್ಲಾವಿಯಾ ಪಿಂಟೊ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in Home

ದಾವಣಗೆರೆ

Advertisement
Advertisement Enter ad code here

Title

To Top