ಡಿವಿಜಿ ಸುದ್ದಿ, ದಾವಣಗೆರೆ: ನ್ಯಾಮತಿ ತಾಲ್ಲೂಕಿನ ರಾಮೇಶ್ವರ ಗ್ರಾಮ ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದಿಂದ ‘ಮಣ್ಣು ಪರೀಕ್ಷಾ ಆಂದೋಲನ’ ಹಮ್ಮಿಕೊಳ್ಳಲಾಗಿತ್ತು.
ಈ ಆಂದೋಲನದಲ್ಲಿ ಕೇಂದ್ರದ ಮಣ್ಣು ವಿಜ್ಞಾನಿಗಳಾದ ಹೆಚ್.ಎಂ. ಸಣ್ಣಗೌಡ್ರು, ಮಣ್ಣು ಪರೀಕ್ಷೆಯ ಮಹತ್ವ ಮತ್ತು ಆರೋಗ್ಯವನ್ನು ರೈತರಿಗೆ ತಿಳಿಸಿಕೊಟ್ಟರು. ಇದೇ ಸಂದರ್ಭದಲ್ಲಿ ಕೇಂದ್ರದ ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥ ಡಾ. ದೇವರಾಜ ಟಿ.ಎನ್, ಕೋವಿಡ್-19 ಸುರಕ್ಷತಾ ಕ್ರಮಗಳನ್ನು ರೈತರಿಗೆ ಮತ್ತು ರೈತ- ಮಹಿಳೆಯರಿಗೆ ತಿಳಿಸಿಕೊಟ್ಟರು.
ಈ ಆಂದೋಲನದಲ್ಲಿ ಶ್ರೀ ಬಸವನಗೌಡ ಎಂ.ಜಿ, ಮಲ್ಲಿಕಾರ್ಜುನ ಬಿ.ಓ., ರಘುರಾಜ ಜೆ. ಮತ್ತು ರೈತ- ರೈತ ಮಹಿಳೆಯರು ಭಾಗವಹಿಸಿದ್ದರು.



