ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಂದು ಬರೋಬ್ಬರಿ 378 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 5,213ಕ್ಕೆ ಏರಿಕೆ ಯಾಗಿದೆ.
ಲಾಕ್ ಡೌನ್ ಸಡಿಲಿಕೆ ನಂತರ ರಾಜ್ಯದಲ್ಲಿ ಭಾರೀ ಸಂಖ್ಯೆಯಲ್ಲಿ ಕೊರೊನಾ ಪಾಸಿಟಿವ್ ಹೆಚ್ಚಾಗುತ್ತಿದ್ದ, ನಿನ್ನೆ ದಾಖಲೆಯ 515 ಮಂದಿಗೆ ಕೊರೊನಾ ದೃಢಪಟ್ಟಿತ್ತು. ನಿನ್ನೆಗಿಂತ ಇಂದು ಸೋಂಕಿತ ಸಂಖ್ಯೆ ಇಳಿಕೆ ಕಂಡಿದೆ.
ಉಡುಪಿ 121, ಯಾದಗಿರಿ 103, ಕಲಬುರಗಿ 69, ಬೆಂಗಳೂರು ನಗರ 18, ದಕ್ಷಿಣ ಕನ್ನಡ 24, ವಿಜಯಪುರ, ದಾವಣಗೆರೆ ಜಿಲ್ಲೆಯಲ್ಲಿ ತಲಾ 6, ಬೆಳಗಾವಿ 5, ಗದಗ 4, ಹಾಸನ, ಮಂಡ್ಯ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ತಲಾ ಮೂವರು, ರಾಯಚೂರು, ಬೀದರ್, ಚಿಕ್ಕಬಳ್ಳಾಪುರ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಇಬ್ಬರಿಗೆ ಹಾಗೂ ತುಮಕೂರು, ಕೋಲಾರ, ಕೊಪ್ಪಳ ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೀದರ್ನ 55 ವರ್ಷದ ಮಹಿಳೆ, ವಿಜಯಪುರದ 82 ವರ್ಷದ ವೃದ್ಧೆ ಕೊರೊನಾಗೆ ಬಲಿಯಾಗಿದ್ದಾರೆ. ಕೊರೊನಾದಿಂದ ಇಂದು ಒಟ್ಟು 280 ಜನರು ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇದರೊಂದಿಗೆ ಗುಣಮುಖರಾಗಿರುವವರ ಸಂಖ್ಯೆ 1,968ಕ್ಕೇರಿದೆ. ರಾಜ್ಯದಲ್ಲಿ ಸದ್ಯ 3,184 ಪ್ರಕರಣಗಳು ಸಕ್ರಿಯಾಗಿವೆ.
ಸಂಜೆಯ ಪತ್ರಿಕಾ ಪ್ರಕಟಣೆ 06/06/2020.
ಸಂಪೂರ್ಣ ಪತ್ರಿಕಾ ಈ ಲಿಂಕನ್ನು ಕ್ಲಿಕ್ ಮಾಡಿ.https://t.co/uvgTpko756@BMTC_BENGALURU @NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/2RLrtFfEof— Karnataka Health Department (@DHFWKA) June 6, 2020



