Connect with us

Dvgsuddi Kannada | online news portal | Kannada news online

ಕ್ರೀಡಾಪಟುಗಳಿಗೆ ಆಲ್ ಬೆಸ್ಟ್

ದಾವಣಗೆರೆ

ಕ್ರೀಡಾಪಟುಗಳಿಗೆ ಆಲ್ ಬೆಸ್ಟ್

ಡಿವಿಜಿಸುದ್ದಿ.ಕಾಂ, ದಾವಣಗೆರೆ:  ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮವಾಗಿ ಸ್ಪರ್ಧಿಸಿ ರಾಜ್ಯ, ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಬಸವರಾಜ್ ಕ್ರೀಡಾಪಟುಗಳಿಗೆ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 2019-20 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾಕೂಟದಲ್ಲಿ ತಿರ್ಪುಗಾರರ ಜವಾಬ್ದಾರಿ ಪ್ರಮುಖವಾಗಿದ್ದು, ತೀರ್ಪುಗಾರರು ಯಾವುದೇ ಪೂರ್ವಾಗ್ರಹ ಪೀಡಿತ ಭಾವನೆಗಳಿಗೆ ಒಳಗಾಗದೇ ನ್ಯಾಯಸಮ್ಮತವಾಗಿ ತೀರ್ಪು ನೀಡಬೇಕು ಎಂದರು.

ಅಥ್ಲೆಟಿಕ್ಸ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಬ್ಯಾಸ್ಕೆಟ್ ಬಾಲ್, ಬ್ಯಾಡ್ಮಿಟನ್, ಥ್ರೋಬಾಲ್, ಕುಸ್ತಿ, ಶಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಫುಟ್ಬಾಲ್, ಹಾಕಿ, ಟೆನ್ನಿಸ್ ಹಾಗೂ ಈಜು ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಸಕ ಎಸ್.ಎ. ರವೀಂದ್ರನಾಥ್ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top