ಡಿವಿಜಿ ಸುದ್ದಿ, ದಾವಣಗೆರೆ: ಮುಂದಿನ ಮೂರು ವರ್ಷದಲ್ಲಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ತರುವ ಬಗ್ಗೆ ಪ್ರಯತ್ನ ಮಾಡುತ್ತೇನೆ. ಈ ಬಗ್ಗೆ ಮುಂದಿನ ಬಜೆಟ್ನಲ್ಲಿ ಘೋಷಣೆ ಮಾಡಲು ಸಚಿವರು ಹಾಗೂ ಶಾಸಕರೊಂದಿಗೆ ಒಗ್ಗೂಡಿ ಒತ್ತಾಯ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಹೇಳಿದರು.
1 ಕೋಟಿ ವೆಚ್ಚದಲ್ಲಿ 10 ಬೆಡ್ಗಳ ಹಿರಿಯ ನಾಗರೀಕರ ವಾರ್ಡ್ ನಿರ್ಮಾಣದ ಗುದ್ದಲಿ ಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಹಂತ ಹಂತವಾಗಿ ನಡೆಸಲಾಗುತ್ತಿದೆ. ಸಂಸದರು, ಶಾಸಕರು, ಜಿಲ್ಲಾಡಳಿತ ಹಾಗೂ ಇಲಾಖಾ ಅಧಿಕಾರಿಗಳೊಂದಿಗೆ ದಿನ ನಿತ್ಯ ಸಂಪರ್ಕದಲ್ಲಿರುವೆ ಎಂದು ಹೇಳಿದರು.
1 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ: ಹಿರಿಯ ನಾಗರಿಕರಿಗೆ ವಿಶೇಷವಾದ ಚಿಕಿತ್ಸೆಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ರೂ. 1 ಕೋಟಿ ವೆಚ್ಚದಲ್ಲಿ 10 ಬೆಡ್ಗಳ ಹಿರಿಯ ನಾಗರೀಕರ ವಾರ್ಡ್ ನಿರ್ಮಾಣ ಮಾಡುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಜೊತೆಗೆ ಸರ್ಕಾರಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸಲು ಹಾಗೂ ಉನ್ನತೀಕರಿಸಲು ಸುಮಾರು ರೂ.100 ಕೋಟಿ ಬೇಕಾಗುತ್ತದೆ ಎಂದು ಮುಖ್ಯಮಂತ್ರ್ರಿಗಳಲ್ಲಿ ಮನವಿ ಮಾಡಲಾಗಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಮಂಜೂರು ಮಾಡುವ ಭರವಸೆ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಹಕಾರ ಸಚಿವ ಸೋಮಶೇಖರ್, ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಎಸ್.ಎ.ರವೀಂದ್ರನಾಥ್, ಪ್ರೊ.ಲಿಂಗಣ್ಣ, ಮಾಡಾಳ್ ವಿರೂಪಾಕ್ಷಪ್ಪ, ಮಹಾಪೌರರು ಬಿ.ಜಿ.ಅಜಯ್ ಕುಮಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಎಸಿ ಮಮತಾ ಹೊಸ್ಗೌಡರ್, ಡಿಎಚ್ಓ ಡಾ.ರಾಘವೇಂದ್ರ ಸ್ವಾಮಿ, ಡಿಎಸ್ ಡಾ.ನಾಗರಾಜ ಮತ್ತಿತರರು ಹಾಜರಿದ್ದದರು.



