ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬವನ್ನು ನಗರದ ರಾಮ್ ಅಂಡ್ ಕೋ ಸರ್ಕಲ್ ನಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಣೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ.ಕೆ.ಶೆಟ್ಟಿ, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಶಾಮನೂರು, ಟಿ. ಬಸವರಾಜ್, ವಿಪಕ್ಷ ನಾಯಕ ಎ. ನಾಗರಾಜ್, ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಗಡಿ ಗುಡಾಳ್ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಎಸ್. ಮಲ್ಲಿಕಾರ್ಜುನ್, ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ.ಎಲ್.ಹರೀಶ್ ಬಸಾಪುರ, ಓಬಿಸಿ ಜಿಲ್ಲಾಧ್ಯಕ್ಷ ಎಂ. ಹಾಲೇಶ್, ಸೇವಾದಳ ಜಿಲ್ಲಾಧ್ಯಕ್ಷ ಡೋಲಿ ಚಂದ್ರು, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿತಾ ಬಾಯಿ ಮಾಲತೇಶ್, ಶುಭಮಂಗಳ, ಸ್ಮಿತಾ ಪಾಟೀಲ್, ಗೀತಾ ಪ್ರಶಾಂತ್, ಗೀತ ಚಂದ್ರಶೇಖರ್, ಮಂಗಳಮ್ಮ, ರಾಧಾಬಾಯಿ, ಸಂಗಮ್ಮ, ಜಯಶ್ರೀ ಮುಖಂಡರಾದ ಅಜ್ಜಪ್ಪ ಪವರ್, ಬೆಳ್ಳೂಡಿ ಮಂಜುನಾಥ, ಶಮಿ ದೇವರಹಟ್ಟಿ, ಯುವರಾಜ್, ಮೇಘರಾಜ, ಬಸವರಾಜ್, ಪ್ರವೀಣ್, ಗೋಪಾಲ್ ಮುಂತಾದವರು ಉಪಸ್ಥಿತರಿದ್ದರು.



