ಡಿವಿಜಿ ಸುದ್ದಿ, ಬೆಂಗಳೂರು: ಹವಾ ನಿಯಂತ್ರಿತ ಬಸ್ಗಳ ಕಾರ್ಯಾಚರಣೆಯನ್ನು ನಾಳೆಯಿಂದ ಆರಂಭಿಸಲು ಕೆಎಸ್ಆರ್ಟಿಸಿ ನಿರ್ಧರಿಸಿದೆ.
ಮೊದಲ ಹಂತದಲ್ಲಿ ಬೆಂಗಳೂರಿನಿಂದ ಮೈಸೂರು, ಮಂಗಳೂರು, ಕುಂದಾಪುರ, ಚಿಕ್ಕಮಗಳೂರು, ಮಡಿಕೇರಿ, ದಾವಣಗೆರೆ, ಶಿವಮೊಗ್ಗ, ವಿರಾಜಪೇಟೆಗೆ ಎ.ಸಿ ಬಸ್ಗಳು ಸಂಚರಿಸಲಿವೆ.
ಬಸ್ಗಳಲ್ಲಿನ ತಾಪಮಾನ 24ರಿಂದ 25 ಸೆಲ್ಸಿಯಸ್ ಇರುವಂತೆ ನಿರ್ವಹಿಸಲು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಕೊರೊನಾ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ರಾತ್ರಿ ಪ್ರಯಾಣದಲ್ಲಿ ಹೊದಿಕೆ ನೀಡದಿರಲು ನಿರ್ಧರಿಸಿದ್ದು, ಪ್ರಯಾಣಿಕರೇ ಹೊದಿಕೆ ತರಬೇಕಿದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.



