ನವದೆಹಲಿ: ಕೊರೊನಾ ವೈರಸ್ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ರೈಲು ಸಂಚಾರವನ್ನು ಆಗಸ್ಟ್ 12 ವರೆಗೆ ರದ್ದು ಮಾಡಲಾಗಿದೆ ಎಂದು ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ.
ವಲಸೆ ಕಾರ್ಮಿಕರಿಗೆ ಶ್ರಮಿಕ್ ರೈಲು ಮತ್ತು ಸಾಮಾನ್ಯ ಜನರ ಓಡಾಟಕ್ಕಾಗಿ 15 ಜೋಡಿ ವಿಶೇಷ ರೈಲುಗಳನ್ನು ಭಾರತೀಯ ರೈಲ್ವೆ ಕಳೆದ ಒಂದು ತಿಂಗಳಿನಿಂದ ಕಾರ್ಯ ನಿರ್ವಹಣೆಗೆ ಅವಕಾಶ ಮಾಡಿಕೊಡಲಾಗಿತ್ತು.
ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸಾಮೂದಾಯಿಕವಾಗಿಯೂ ಹರಡುವ ಭೀತಿ ಎದುರಾಗಿದೆ. ಹೀಗಾಗಿ ಭಾರತೀಯ ರೈಲ್ವೆ ಇಂದು ದೇಶದ ಎಲ್ಲಾ ರೈಲು ಸಂಚಾರವನ್ನೂ ಆಗಸ್ಟ್ 12ರವರೆಗೆ ರದ್ದು ಮಾಡಿ ಆದೇಶಿಸಿದೆ. ಅಲ್ಲದೆ, ಜುಲೈ 1 ರಿಂದ ಆಗಸ್ಟ್ 12 ರವರೆಗೆ ಸಾಮಾನ್ಯ ರೈಲುಗಳಿಗೆ ಟಿಕೆಟ್ ಕಾಯ್ದಿರಿಸಿದವರಿಗೆ ಹಣವನ್ನು ಪೂರ್ಣ ಮರುಪಾವತಿ ಮಾಡಲು ಮುಂದಾಗಿದೆ.



