ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿಗೊಳಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶಾಸಕರ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾಡನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ಇಂತಹ ಸಂದರ್ಭದಲ್ಲಿ ಮತ್ತೆ ಲಾಕ್ಡೌನ್ ಮಾಡುವುದು ಸರಿಯಲ್ಲ. ಕೊರೊನಾ ತಡೆಗೆ ರಾಜ್ಯ ಸರ್ಕಾರ ಅಗತ್ಯ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.
ಬೆಂಗಳೂರಲ್ಲಿ ಪಕ್ಷಗಳ ಶಾಸಕರು ಕೋವಿಡ್ ತಡೆಯಲು ಶ್ರಮಿಸಬೇಕು. ನಗರದಲ್ಲಿ ಕೊರೊನಾ ನಿಯಂತ್ರಿಸುವ ಸಂಬಂಧ ಎಲ್ಲರ ಅಭಿಪ್ರಾಯ ಪಡೆದು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.



