ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಮಹಾ ಸ್ಫೋಟ ಸಂಭವಿಸಿದೆ. ಇಂದು ಒಂದೇ ದಿನ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, 1,267 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಇಂದು ಬರೋಬ್ಬರಿ 783 ಪ್ರಕರಣಗಳು ವರದಿಯಾಗಿವೆ. ಈ ಕೊರೊನಾ ಮಹಾ ಸ್ಫೋಟಕ್ಕೆ ಸಿಲಿಕಾನ್ ಸಿಟಿ ಜನರು ತತ್ತರಿಸಿ ಹೋಗಿದ್ದಾರೆ. ಇದಲ್ಲದೆ ಒಂದೇ ದಿನ 16 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಆರೋಗ್ಯ ಇಲಾಖೆಯ ಮಾಹಿತಿ ನೀಡಿದ್ದು, ಬೆಂಗಳೂರು ನಗರ 783, ದಕ್ಷಿಣ ಕನ್ನಡ 97, ಬಳ್ಳಾರಿ 71, ಉಡುಪಿ 40, ಕಲಬುರಗಿ 34, ಹಾಸನ 31, ಗದಗ 30, ಬೆಂಗಳೂರು ಗ್ರಾಮಾಂತರ 27, ಧಾರವಾಡ 18, ಮೈಸೂರು 18, ಬಾಗಲಕೋಟೆ 17, ಉತ್ತರ ಕನ್ನಡ 14, ಹಾವೇರಿ 12, ಕೋಲಾರ 11, ಬೆಳಗಾವಿ 8, ಬೀದರ್ 7, ಚಿತ್ರದುರ್ಗ 7, ರಾಯಚೂರು 6, ಮಂಡ್ಯ 6, ದಾವಣಗೆರೆ 6, ವಿಜಯಪುರ 5, ಶಿವಮೊಗ್ಗ 4, ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕಮಗಳೂರು, ಕೊಡಗು ತಲಾ ಮೂರು, ತುಮಕೂರು 2 ಮತ್ತು ಯಾದಗಿರಿಯಲ್ಲಿ ಒಂದು ಪಾಸಿಟಿವ್ ಪತ್ತೆಯಾಗಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,190ಕ್ಕೆ ಏರಿಕೆಯಾಗಿದೆ. ಇಂದು 16 ಮಂದಿ ಸಾವನ್ನಪ್ಪಿದ್ದು, 220 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇನ್ನು 5,472 ಸಕ್ರಿಯ ಕೊರೊನ ಪ್ರಕರಣಗಳಿವೆ. ಐಸಿಯು ವಾರ್ಡ್ ನಲ್ಲಿ 243 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.



