Connect with us

Dvgsuddi Kannada | online news portal | Kannada news online

ನೂತನ ಮರಳು ನೀತಿ: ಸಚಿವ ಸಿಸಿ ಪಾಟೀಲ್

Home

ನೂತನ ಮರಳು ನೀತಿ: ಸಚಿವ ಸಿಸಿ ಪಾಟೀಲ್

ದಾವಣಗೆರೆ: ರಾಜ್ಯದ ಎಲ್ಲಾ ಶಾಸಕರ ಸಭೆ ಕರೆದು ಜನ ಸ್ನೇಹಿ ನೂತನ ಮರಳು ನೀತಿ ರೂಪಿಸುತ್ತೇನೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ಹೇಳಿದರು.

ದಾವಣಗೆರೆ ಜಿಲ್ಲೆಯ ಹರಹರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಭೇಟಿ ವೇಳೆ ಮಾತನಾಡಿದ ಸಚಿವರು, ಭೂ ವಿಜ್ಞಾನ ಇಲಾಖೆಗೆ ಹೊಸ ಕಾಯಕಲ್ಪ ನೀಡಬೇಕಿದ್ದು, ಅಕ್ರಮ ಮರಳು ಗಣಿಗಾರಿಕೆ ತಡೆಯಬೇಕಿದೆ. ಈ ಬಗ್ಗೆ ರಾಜ್ಯದ ಎಲ್ಲ ಶಾಸಕರ ಸಭೆ ಕರೆದು ಸಮಗ್ರ ಮರಳು ನೀತಿ ರೂಪಿಸಲಾಗುವುದು. ಇದರೊಂದಿಗೆ ರಾಜ್ಯ ಸರ್ಕಾರಕ್ಕೆ ಆದಾಯದ ಜೊತೆಗೆ ಜನರಿಗೆ ಸಮರ್ಪಕವಾಗಿ ಮರಳು ಪೂರೈಸಲು ಅನುಕೂಲವಾಗಲಿದೆ ಎಂದರು.

ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಸಂಪೂರ್ಣವಾಗಿ ಅಧಿಕಾರಾವಧಿ ಮುಗಿಸಲಿದೆ. ಇನ್ನು ಪಕ್ಷದದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಣ್ಣ-ಪುಟ್ಟ ಸಮಸ್ಯೆಗಳನ್ನು ಮುಖ್ಯಮಂತ್ರಿ ಮತ್ತು ಪಕ್ಷದ ಹೈಕಮಾಂಡ್ ಬಗೆಹರಿಸಲಿದೆ. ಸರ್ಕಾರಕ್ಕೆ ಟೀಕ್ ಆಫ್ ಆಗಬಲು ಸಮಯಬೇಕಿದೆ ಎಂದದರು

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in Home

Advertisement

ದಾವಣಗೆರೆ

Advertisement
To Top