Connect with us

Dvgsuddi Kannada | online news portal | Kannada news online

ಹಿಂದೂ ಏಕತಾ ಗಣಪತಿ ಮೆರವಣಿಯಲ್ಲಿ ಅವಘಡ: ಗಣೇಶಮೂರ್ತಿ ಪಲ್ಟಿ

ಚನ್ನಗಿರಿ

ಹಿಂದೂ ಏಕತಾ ಗಣಪತಿ ಮೆರವಣಿಯಲ್ಲಿ ಅವಘಡ: ಗಣೇಶಮೂರ್ತಿ ಪಲ್ಟಿ

ವಿಜಿಸುದ್ದಿ.ಕಾಂ ಚನ್ನಗಿರಿ: ಹಿಂದೂ ಏಕತಾ ಗಣಪತಿ ವಿಸರ್ಜನೆ ವೇಳೆ ಪೊಲೀಸರು ಮತ್ತು ಗಣಪತಿ ಸಂಘಟನಾ ಸಮಿತಿ ನಡುವೆ ಮಾತಿನ ಚಕಮಕಿಯಾಗಿ ಟ್ಯಾಕ್ಟರ್‌ನಲ್ಲಿದ್ದ ಗಣೇಶಮೂರ್ತಿ ಪ್ಟಲಿಯಾದ ಘಟನೆ ಚನ್ನಗಿರಿಯಲ್ಲಿ ನಡೆದಿದೆ.

channagiri gnesh dvgsuddi

ಗಣೇಶಮೂರ್ತಿ ಟ್ಯಾಕ್ಟರ್ ನಿಂದ ಬೀಳುತ್ತಿದ್ದಂತೆ ಸಂಘಟನೆ ಕಾರ್ಯಕರ್ತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಯುವಕರು ಪೊಲೀಸರ ವಿರುದ್ಧ ಕೂಗಲಾರಂಭಿಸಿದರು. ಇದರಿಂದ ಇಡೀ ಚನ್ನಗಿರಿ ತಾಲ್ಲೂಕಿನಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಕೊನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

channagiri dvgsuddi

ಹಿಂದೂ ಏಕತಾ ಗಣಪತಿ ವಿಸರ್ಜನೆ ವೇಳೆ ಡಿಜೆ ಬಳಕೆಗೆ ಸಂಬಂಧಿಸಿ ಪೊಲೀಸರು ಮತ್ತು ಸಮಿತಿ ಕಾರ್ಯಕರ್ತರ ನಡುವೆ ಒಮ್ಮತ ಮೂಡದ ಹಿನ್ನೆಲೆ ಗಲಾಟೆ ನಡೆದಿದೆ. 6  ಡಿಜೆಗೆ ಬಳಸಲು ಗಣಪತಿ ಸಮಿತಿ ಅನುಮತಿ ಕೇಳಿತ್ತು. ಆದರೆ, ಪೊಲೀಸರು ಡಿಜೆ ಬಳಕೆಗೆ ಅನುಮತಿ ನೀಡದ ಹಿನ್ನೆಲೆ ಸಂಘಟನಕಾರರು ಮೆರವಣಿಗೆ ಮುಂದುವರಿಸಲು ಸಾಧ್ಯವಿಲ್ಲ ಎಂದು ಅಲ್ಲಿಗೆ ನಿಲ್ಲಿಸಿ ಬಿಟ್ಟು ಹೋಗಿದರು.

dvgsuddi

ಆಗ ಪೊಲೀಸರೇ ಗಣೇಶ್ ಮೂರ್ತಿ ವಿಸರ್ಜನೆಗೆ ಹೋದಾಗ ಟ್ಯಾಕ್ಟರ್ ನಿಂದ ಗಣೇಶ್ ಮೂರ್ತಿ ಬಿದ್ದಿದೆ. ಇದರಿಂದ ಆಕ್ರೋಶಶಗೊಂಡ ಕಾರ್ಯಕರ್ತರು ಧಿಕ್ಕಾರ ಕೂಗಿದರು. ದಾವಣಗೆರೆ ಜಿಲ್ಲಾಧಿಕಾರಿ ಬಂದ ನಂತರ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಗಣೇಶ ವಿಸರ್ಜನೆ ಮಾಡಲಾಯಿತು

ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 98444603336, 7483892205

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top