ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯ ಚುನಾವಣೆ ಆಯೋಗ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಮಧ್ಯ ಕರ್ನಾಟಕ ದಾವಣಗೆರೆಯಲ್ಲಿ ಮತ್ತೆ ಚುನಾವಣೆ ಕಾವು ರಂಗೇರಲಿದೆ. ದಾವಣಗೆರೆ ಮಹಾನಗರ ಪಾಲಿಕೆ ಅವಧಿ ಡಿಸೆಂಬರ್ ನಲ್ಲಿ ಮುಕ್ತಯವಾಗುವ ಹಿನ್ನೆಲೆ ಚುನಾವಣಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯ ಚುನಾವಣೆ ಆಯೋಗ ಅಧಿಸೂಚನೆ ಹೊರಡಿಸಿದೆ.

election copy

ರಾಜ್ಯ ಚುನಾವಣೆಗೆ ಆಯೋಗದ ಈ ಅಧಿಸೂಚನೆಯಿಂದ ಜಿಲ್ಲಾಡಳಿತ ಅರ್ಲಟ್ ಆಗಿದ್ದು, ಚುನಾವಣಗೆ ಬೇಕಾದ ಎಲ್ಲ ರೀತಿಯ ತಯಾರಿಯಲ್ಲಿ ತೊಡಗಿದೆ. ಇನ್ನೊಂದೆಡೆ ರಾಜಕೀಯ ಪಕ್ಷಗಳು ಕೂಡ ಅಭ್ಯರ್ಥಿಗಳ ಆಯ್ಕೆ, ಚುನಾವಣ ತಂತ್ರಗಾರಿಕೆಯಲ್ಲಿ ತೊಡಗಿಕೊಂಡಿವೆ.

ದಾವಣಗೆರೆ ಮಹಾನಗರ ಸೇರಿದಂತೆ ೧೦ ನಗರಸಭೆ, ಪುರ ಸಭೆ ಮತ್ತು ಪಟ್ಟಣ ಪಂಚಾಯತಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯ ಚುನಾವಣೆ ಆಯೋಗ ಸೂಚನೆ ನೀಡಿದೆ.

ಮತದಾರರ ಪಟ್ಟಿ, ಮತದಾನ ಕೇಂದ್ರ, ಮತದಾನ ಸಿಬ್ಬಂದಿ ನೇಮಕ, ಚುನಾವಣಾಧಿಕಾರಿಗಳ ನೇಮಕ, ಅಭ್ಯರ್ಥಿಗಳ ಚುನಾಚಣೆ ವೆಚ್ಚಗಳ ಪರೀಶಿಲನೆ, ಗುರುತು ಸೀಲುಗಳ ತಯಾರಿ ಮತ್ತು ನಿರ್ವಹಣೆ, ಚುನಾವಣಾ ಸಾಮಗ್ರಿಗಳ ಸಂಗ್ರಹಣೆ ಹಾಗೂ ಅನುದಾನ ಸಿದ್ಧತೆ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಿಸಲಾಗಿದೆ. ದಾವಣಗೆರೆಯ ಮಹಾನಗರ ಪಾಲಿಕೆ ವ್ಯಾಪ್ತಿಯ ೪೫ ವಾರ್ಡ್ಗಳಿದ್ದು, ಎಲ್ಲ ವಾರ್ಡ್ಗಳಲ್ಲಿ ಅಗತ್ಯವಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಆದೇಶಿಸಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *