Connect with us

Dvgsuddi Kannada | online news portal | Kannada news online

ದಾವಣಗೆರೆ: ಸ್ಮಾರ್ಟ್ ಸಿಟಿ ಯೋಜನೆಯಡಿ ಸರ್ಕಾರಿ ಶಾಲೆಗಳಲ್ಲಿ 62 ಸ್ಮಾರ್ಟ್ ಕ್ಲಾಸ್, 3 ಕೋಟಿ ಹಣ ಮೀಸಲು..!

ದಾವಣಗೆರೆ

ದಾವಣಗೆರೆ: ಸ್ಮಾರ್ಟ್ ಸಿಟಿ ಯೋಜನೆಯಡಿ ಸರ್ಕಾರಿ ಶಾಲೆಗಳಲ್ಲಿ 62 ಸ್ಮಾರ್ಟ್ ಕ್ಲಾಸ್, 3 ಕೋಟಿ ಹಣ ಮೀಸಲು..!

ಡಿವಿಜಿ ಸುದ್ದಿ, ದಾವಣಗೆರೆ:  ಸ್ಮಾಟ್‍ಸಿಟಿ ಯೋಜನೆಯಡಿ ನಗರದ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ತಂತ್ರಜ್ಞಾನ ಆಧಾರಿತ ಸ್ಮಾರ್ಟ್ ತರಗತಿಗಳನ್ನು ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗಿದೆ. ಇದರ ಜೊತೆಗೆ ದಿ ಅರ್ಬನ್ ಲರ್ನಿಂಗ್ ಇಂಟರ್ನ್‍ಷಿಪ್ ಪ್ರೋಗ್ರಾಂ (ಟ್ಯುಲಿಪ್) ಯೋಜನೆಯಡಿಯಲ್ಲಿ ಎಂಜಿನಿಯರ್‍ಗಳಿಗೆ ವೃತ್ತಿಪರ ಕಲಿಕೆಯ ಅನುಭವ ಹೆಚ್ಚಿಸಲು ಇಂಟರ್ನ್‍ಷಿಪ್‍ಗೆ ಅವಕಾಶ ಒದಗಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರಾದ ರವೀಂದ್ರ ಮಲ್ಲಾಪುರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಜಿಟಲ್ ತಂತ್ರಜ್ಞಾನ ಆಧಾರಿತ ಸ್ಮಾರ್ಟ್ ತರಗತಿಗಳನ್ನು ನಿರ್ಮಿಸುವ ಕಾಮಗಾರಿ ಎರಡು ಹಂತಗಳಲ್ಲಿ ಕೈಗೊಳ್ಳಲಾಗಿದೆ. ಮೊದಲನೇ ಹಂತದಲ್ಲಿ 19 ಶಾಲೆಗಳಲ್ಲಿ 62 ಸ್ಮಾರ್ಟ್ ತರಗತಿಗಳು ಮತ್ತು 19 ಸ್ಮಾರ್ಟ್ ಲ್ಯಾಬ್ ನಿರ್ಮಿಸುವ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿ ರೂ. 3 ಕೋಟಿ ಮೊತ್ತದ್ದಾಗಿದೆ. ಹಾಗೂ ಎರಡನೇ ಹಂತದಲ್ಲಿ 10 ಶಾಲೆಗಳಲ್ಲಿ 40 ಸ್ಮಾರ್ಟ್ ತರಗತಿಗಳು ಮತ್ತು 11 ಸ್ಮಾರ್ಟ್ ಲ್ಯಾಬ್‍ಗಳನ್ನು ನಿರ್ಮಿಸುವ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದ್ದು, ಈ ಕಾಮಗಾರಿಯು ರೂ. 2 ಕೋಟಿ ವೆಚ್ಚದ್ದಾಗಿದೆ ಎಂದು ತಿಳಿಸಿದರು.

ವಿಶೇಷವಾಗಿ ಎರಡನೇ ಹಂತದ ಕಾಮಗಾರಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ‘ವಿದ್ವತ್ ಎಜುಕೇಷನಲ್ ಮೊಬೈಲ್ ಆ್ಯಪ್‍ನ್ನು’ ಅನಾವರಣಗೊಳಿಸಲಾಗುತ್ತಿದೆ. ಜಿಲ್ಲೆಯಾದ್ಯಂತ ಓದುತ್ತಿರುವ 8, 9 ಮತ್ತು 10ನೇ ತರಗತಿಯ ಸರ್ಕಾರಿ ಮತ್ತು ಖಾಸಗಿ ಶಾಲೆಯ ವಿದ್ಯಾರ್ಥಿಗಳು ಅಭ್ಯಸಿಸಲು ವಿದ್ವತ್ ಆ್ಯಪ್‍ನ್ನು 2 ತಿಂಗಳು ಕಾಲ ಉಚಿತವಾಗಿ ನೀಡಲಾಗುತ್ತಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ 10 ತಿಂಗಳುಗಳ ಕಾಲ ಉಚಿತವಾಗಿ ನೀಡಲಾಗುತ್ತದೆ ಎಂದರು.

digit

ಸ್ಮಾರ್ಟ್ ತರಗತಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣ ಪ್ರತಿಯೊಬ್ಬರಿಗೂ ಅಗತ್ಯವಾಗಿದೆ. ಡಿಜಿಟಲ್ ತಂತ್ರಜ್ಞಾನದ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು ಸ್ಮಾರ್ಟ್ ತರಗತಿಯಾಗಿದೆ.

ವಿದ್ವತ್ ಎಜುಕೇಷನಲ್ ಮೊಬೈಲ್ ಆ್ಯಪ್: ಈ ಆ್ಯಪ್ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಡಿಜಿಟಲ್ ಶಿಕ್ಷಣವನ್ನು ಒದಗಿಸುವುದೇ ತನ್ನ ಮುಖ್ಯ ಧ್ಯೇಯವನ್ನಾಗಿಸಿಕೊಂಡಿದೆ. ಈ ಕಲಿಕಾ ಸೌಲಭ್ಯವು ಶಾಲೆಗಳಿಗೆ ಮಾತ್ರ ಸೀಮಿವಾಗಿರದೇ ಆ್ಯಪ್‍ನಲ್ಲೂ ಕೂಡ ಲಭ್ಯವಿದೆ. ವಿದ್ಯಾರ್ಥಿಗಳ ಕಲಿಕೆಗೆ ಒಂದು ಉತ್ತಮ ಸಾಧನವಾಗಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಯಬೇಕಾದ ಪಠ್ಯ ವಿಷಯಗಳನ್ನು ವಿದ್ವತ್ ಆ್ಯಪ್ ಮೂಲಕ ಮನೆಯಲ್ಲಿಯೇ ಸುರಕ್ಷಿತವಾಗಿ ಅಭ್ಯಾಸ ಮಾಡಬಹುದಾಗಿದೆ.

ಪದವಿ ಹಂತದ ಶಿಕ್ಷಣವನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಇಂಟರ್ನ್‍ಷಿಪ್‍ಗೆ ಅವಕಾಶ ನೀಡುವ ಮೂಲಕ ಸ್ಮಾರ್ಟ್‍ಸಿಟಿಯಂತಹ ಯೋಜನೆಗಳಲ್ಲಿ ನಿರ್ಣಾಯಕ ಸವಾಲಗಳನ್ನು ಪರಿಹರಿಸಲು ಹೊಸ ಆಲೋಚನೆ ಮತ್ತು ನವೀನ ಚಿಂತನೆ ಬಳಸಿಕೊಳ್ಳಲು ಪ್ರಯತ್ನಿಸಲಾಗುವುದು ಎಂದರು.

ಜಿಲ್ಲೆಯಲ್ಲಿ 6 ಇಂಟರ್ನ್‍ಗಳಿಗೆ ಅವಕಾಶ ನೀಡಲಾಗುತ್ತಿದೆ. ಬಿ.ಇ ಸಿವಿಲ್ ಪದವಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಭಾರತೀಯ ನಾಗಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅಂತಿಮ ವರ್ಷದ ಫಲಿತಾಂಶವನ್ನು ಷೋಷಿಸಿದ ದಿನಾಂಕದಿಂದ ಇಂಟರ್ನ್‍ಷಿಪ್ ಪಡೆಯಲು ಬಯಸಿದ ದಿನಾಂಕದವರೆಗೆ 18 ತಿಂಗಳುಗಳಿಗಿಂತ ಹೆಚ್ಚಿರುವಂತಿಲ್ಲ. ಇಂಟರ್ನ್‍ಷಿಪ್ ಅವಧಿಯು ಕನಿಷ್ಠ 8 ವಾರದಿಂದ ಗರಿಷ್ಠ 1 ವರ್ಷದವರೆಗೆ ಇರುತ್ತದೆ ಎಂದು ತಿಳಿಸಿದರು.

ಇಂಟರ್ನ್‍ಷಿಪ್‍ಗಾಗಿ ಅರ್ಜಿಗಳನ್ನು ಟ್ಯುಲಿಪ್ ಪೋರ್ಟಲ್ hಣಣಠಿs://iಟಿಣeಡಿಟಿshiಠಿ.ಚಿiಛಿಣe-iಟಿಜiಚಿ.oಡಿg/ ಮೂಲಕ ಮಾತ್ರ ಸ್ವೀಕರಿಸಲಾಗುತ್ತದೆ. ಅರ್ಜಿದಾರನು ತಮ್ಮ ಅರ್ಜಿಯೊಂದಿಗೆ ನಗರ ಸಮಸ್ಯೆಗಳ ಸಾರಾಂಶವನ್ನು 1000 ಪದಗಳಿಗೆ ಮೀರದಂತೆ ಜೊತೆಗೆ ಇಂಟರ್ನ್‍ಷಿಪ್ ಕೈಗೊಳ್ಳುವ ಉದ್ದೇಶಗಳ ಬಗ್ಗೆ ಸಂಕ್ಷಿಪ್ತವಾಗಿ ಬರೆಯಬೇಕು. ಇದರೊಂದಿಗೆ ಅಭ್ಯರ್ಥಿಯು ತಾವು ಅಧ್ಯಯನ ನಡೆಸಿದ ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಯ ಸಕ್ಷಮ ಪ್ರಾಧಿಕಾರದಿಂದ ಶಿಫಾರಸ್ಸನ್ನು ಒಳಗೊಂಡಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗೆ ತಿಂಗಳಿಗೆ ರೂ. 8 ಸಾವಿರ ಪ್ರೋತ್ಸಾಹಧನವನ್ನು ಸ್ಮಾರ್ಟ್‍ಸಿಟಿ ವತಿಯಿಂದ ಭರಿಸಲಾಗುವುದು ಎಂದು ಹೇಳಿದರು.

ಡಿಡಿಪಿಐ ಪರಮೇಶ್ವರಪ್ಪ ಮಾತನಾಡಿ, ಜೂ. 1 ರಿಂದ ಶಾಲೆಗಳು ಪ್ರಾರಂಭವಾಗಬೇಕಿತ್ತು. ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳ ಪ್ರಾರಂಭ ವಿಳಂಬವಾಗಿದೆ. ಸ್ಪರ್ಧಾತ್ಮಕ ಜಗತ್ತು ಇದಾಗಿರುವುದರಿಂದ ಖಾಸಗಿ ಸಂಸ್ಥೆಗಳು ಹೆಚ್ಚಿನ ಪ್ರಮಾಣದಲ್ಲಿ ಆನ್‍ಲೈನ್ ಶಿಕ್ಷಣಕ್ಕೆ ಒತ್ತು ನೀಡುತ್ತಿವೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಈ ಸೌಲಭ್ಯಗಳು ಕಡಿಮೆ ಇವೆ. ಈ ಹಿನ್ನೆಲೆಯಲ್ಲಿ ವಿದ್ವತ್ ಎಜುಕೇಷನಲ್ ಮೊಬೈಲ್ ಆ್ಯಪ್ ಸಹಕಾರಿಯಾಗಿದೆ. ಪಠ್ಯಾಧಾರಿತವಾಗಿ ಕಲಿಕೆಯ ಮೂಲಕ ವಿದ್ಯಾರ್ಥಿಗಳ ಸಾಮರ್ಥ್ಯ ಹೆಚ್ಚಿಸಲು ಅನುಕೂಲವಾಗಲಿದೆ ಎಂದರು.

ವಿದ್ವತ್ ಎಜುಕೇಷನಲ್ ಮೊಬೈಲ್ ಆ್ಯಪ್‍ನ ಸಿಇಓ ರೋಹಿತ್ ಎಂ.ಪಾಟೀಲ್ ಮಾತನಾಡಿ, ವಿದ್ವತ್ ಎಜುಕೇಷನಲ್ ಮೊಬೈಲ್ ಆ್ಯಪ್‍ನ್ನು ಡಿಸೆಂಬರ್ 2019 ರಲ್ಲಿ ಲಾಂಚ್ ಮಾಡಲಾಗಿದೆ. ಕನ್ನಡ, ಇಂಗ್ಲೀಷ್ ಹಾಗೂ ಉರ್ದು ಭಾಷೆಯಲ್ಲಿ ಲಭ್ಯವಿದೆ. ಇದು 6 ವಿಷಯಗಳು ಒಳಗೊಂಡಿದ್ದು, ಇದರಲ್ಲಿ ಅನಿಮೇಷನ್ ಹಾಗೂ ಪ್ರಶ್ನೆ ಪತ್ರಿಕೆ ಇವೆ. ಈ ಆ್ಯಪ್ ಮುಖ್ಯವಾಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ತಯಾರಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಡಯಟ್ ಪ್ರಾಂಶುಪಾಲ ಎಚ್.ಕೆ.ಲಿಂಗರಾಜು, ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top