Connect with us

Dvgsuddi Kannada | online news portal | Kannada news online

4 ಕೋಟಿ ಕಳ್ಳತನ ಮಾಡಿದ್ದ ಬ್ಯಾಂಕಿನಲ್ಲಿ ಮತ್ತೆ ಕಳ್ಳತನ..!

ದಾವಣಗೆರೆ

4 ಕೋಟಿ ಕಳ್ಳತನ ಮಾಡಿದ್ದ ಬ್ಯಾಂಕಿನಲ್ಲಿ ಮತ್ತೆ ಕಳ್ಳತನ..!

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಕಳೆದ ನಾಲ್ಕು ವರ್ಷದ ಹಿಂದೆ ದಾವಣಗೆರೆ ಜಿಲ್ಲೆ ಜನರನ್ನೇ ಬೆಚ್ಚಿ ಬೀಳಿಸಿದ್ದ ಬ್ಯಾಂಕ್ ದರೋಡೆ ಕೋರರು, ಇದೀಗ ಮತ್ತೆ ಅದೇ ಬ್ಯಾಂಕ್ ನ ಗೋಡೆ ಕೊರೆದು ದರೋಡೆ ಮಾಡಿದ್ದಾರೆ.

ದಾವಣಗೆರೆ ಜಿಲ್ಲೆ ಅರಕೆರೆ ಕರ್ನಾಟಕ ಬ್ಯಾಂಕ್ ನಲ್ಲಿ ನಾಲ್ಕು ವರ್ಷದ  ಹಿಂದೆ 4 ಕೋಟಿಯ ಚಿನ್ನಾಭರಣ, ನಗದು ಕಳ್ಳತನವಾಗಿತ್ತು. ಆ ದುರಂತ  ಇನ್ನು ಮಾಸುವ ಮುನ್ನವೇ  ಮತ್ತೇ ಕಳ್ಳರು ಅದೇ ಬ್ಯಾಂಕಿಗೆ ಕನ್ನ ಹಾಕಿದ್ದಾರೆ.

ನಾಲ್ಕು ವರ್ಷದ ಹಿಂದೆ ಹೊನ್ನಾಳಿ -ಶಿವಮೊಗ್ಗ ರಸ್ತೆಯ ಅರಕೆರೆಯ ಕರ್ನಾಟಕ  ಬ್ಯಾಂಕ್  ಶಾಖೆಗೆ ಕನ್ನ ಹಾಕಿದ್ದ ಕಳ್ಳರು, ಇದೀಗ ಅದೇ ಮಾದರಿಯಲ್ಲಿ ಗೋಡೆ ಕೊರೆದು ದರೋಡೆ ಮಾಡಿದ್ದಾರೆ.  ಬ್ಯಾಂಕ್   ಹಿಂಬಂದಿಯ ಗೋಡೆ  ಕೊರೆದು ಚಿನ್ನಾಭರಣ ಸಹಿತ  ನಗದು ಹಣವನ್ನು ದೋಚಿದ್ದಾರೆ.

ಸ್ಥಳಕ್ಕೆ ಹೊನ್ನಾಳಿ ಪೊಲೀಸರು ಸೇರಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಕಳ್ಳತನ ಬೇಧಿಸಲು 2 ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top