Connect with us

Dvgsuddi Kannada | online news portal | Kannada news online

ಸರ್ವೇ ವರದಿ ಆಧಾರಿಸಿ ಕೇಂದ್ರ ಸರ್ಕಾರ ನೆರವು ನೀಡಲಿದೆ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

ರಾಜ್ಯ ಸುದ್ದಿ

ಸರ್ವೇ ವರದಿ ಆಧಾರಿಸಿ ಕೇಂದ್ರ ಸರ್ಕಾರ ನೆರವು ನೀಡಲಿದೆ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

ಡಿವಿಜಿಸುದ್ದಿ.ಕಾಂ, ಚಿಕ್ಕಮಗಳೂರು: ಈ ಬಾರಿ 7 ರಿಂದ 8 ರಾಜ್ಯದಲ್ಲಿ ಪ್ರವಾಹ, ಅತಿವೃಷ್ಟಿಯಾಗಿದೆ. ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಂದ ವರದಿ ತರಿಸಿಕೊಂಡು, ನಂತರ ಪರಿಹಾರ ಘೋಷಣೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

yadiyurappa dvgsuddi

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶಾರದಾಂಭೆಯ ದರ್ಶನ ಪಡೆದು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯದಲ್ಲಿಯೂ ಈ ಬಾರಿ ಭಾರೀ ಪ್ರವಾಹ ಉಂಟಾಗಿ ಜನರು ಸಂಕಷ್ಟದಲ್ಲಿದ್ದಾರೆ. ಎಲ್ಲ ರಾಜ್ಯಗಳಲ್ಲಿಯೂ ಹಾನಿ ಪ್ರಮಾಣದ ಸರ್ವೇ ಕಾರ್ಯ ನಡೆಯುತ್ತಿದೆ. ಈ ಸರ್ವೆ ಆಧಾರಿಸಿ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಲಿದೆ ಎಂದರು.

cm yadiyurappa shrungere dvgsuddi 1

 

ಚಿಕ್ಕಮಗಳೂರಿನಲ್ಲಿಯೂ ಕಾಫಿ ತೋಟಗಳಿಗೆ ಹಾನಿ ಉಂಟಾಗಿದೆ. ಎಷ್ಟು ಪ್ರಮಾಣದಲ್ಲಿ ಹಾನಿ ಆಗಿದೆ ಎಂಬುದನ್ನು ಸರ್ವೇ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಸರ್ವೇ ಕಾರ್ಯ ಮುಗಿದ ಮೇಲೆ ಹಣ ಬಿಡುಗಡೆ ಮಾಡುತ್ತೇವೆ. ಎಂದರು. ಇನ್ನು ಸಂಪೂರ್ಣವಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿಯನ್ನು ಕೊಡಲು ತೀರ್ಮಾನಿಸಿದ್ದೇವೆ. ಮೊದಲ ಕಂತಿನಲ್ಲಿ 1 ಲಕ್ಷ ರೂಪಾಯಿಯನ್ನು ನಾಳೆಯಿಂದ ಬಿಡುಗಡೆ ಮಾಡಲಾಗುವುದು. ಸಣ್ಣ ಪ್ರಮಾಣದಲ್ಲಿ ಮನೆ ಹಾನಿಗೊಳಗಾಗಿದ್ದರೆ, 1 ಲಕ್ಷ ರೂಪಾಯಿ ನೀಡಿದ್ದೇನೆ ಎಂದರು.

ಕೇಂದ್ರ ಸರ್ಕಾರದಿಂದ ಪ್ರವಾಹ ಪೀಡಿತರಿಗೆ ಅನುದಾನ ಬಂದಿಲ್ಲವೆಂದು ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಬಿ.ಎಸ್. ಯಡಿಯೂರಪ್ಪ, ವಿರೋಧ ಪಕ್ಷದಲ್ಲಿರುವ ಕಾಂಗ್ರೆಸ್ ಪಕ್ಷ ಸದಾ ಚಟುವಟಿಕೆಯಿಂದ ಇರಬೇಕೆಂದು ಈ ರೀತಿ ಪ್ರತಿಭಟನೆ ನಡೆಸುತ್ತಿದೆ. ಈ ಪ್ರತಿಭಟನೆ ಮಾಡೋರಿಗೆ ಬೇಡ ಅನ್ನೋದಕ್ಕೆ ಆಗುತ್ತಾ ಎಂದರು.

ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 98444603336, 7483892205

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top