Connect with us

Dvgsuddi Kannada | online news portal | Kannada news online

ದಾವಣಗೆರೆಗೆ ಸಚಿವ ಸ್ಥಾನ ನೀಡದಕ್ಕೆ ಸಂಸದ ಜಿಎಂ ಸಿದ್ದೇಶ್ವರ ಬೇಸರ

ದಾವಣಗೆರೆ

ದಾವಣಗೆರೆಗೆ ಸಚಿವ ಸ್ಥಾನ ನೀಡದಕ್ಕೆ ಸಂಸದ ಜಿಎಂ ಸಿದ್ದೇಶ್ವರ ಬೇಸರ

ದಾವಣಗೆರೆ: ರಾಜ್ಯ ಸರ್ಕಾರದಲ್ಲಿ ಜಿಲ್ಲೆಗೆ ಸಚಿವ ಸ್ಥಾನ ನೀಡದಕ್ಕೆ ಸಂಸದ ಜಿ.ಎಂ.ಸಿದ್ದೇಶ್ವರ ಬೇಸರ ವ್ಯಕ್ತಪಡಿಸಿದ್ರು.

ಹೆಬ್ಬಾಳದ ಶ್ರೀ ರುದ್ರೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಕೃಷ್ಣ ಯಾದವ ಸಮಿತಿ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದ ನಂತರ ಮಾತನಾಡಿ, ಜಿಲ್ಲೆಯ 8 ವಿಧಾನ  ಸಭಾ ಕ್ಷೇತ್ರದಲ್ಲಿ 6 ಬಿಜೆಪಿ ಶಾಸಕರು ಗೆದ್ದಿದ್ದಾರೆ. ಆರು ಜನರಲ್ಲಿ ಯಾರಿಗೆ ಸಚಿವ ಸ್ಥಾನ ಕೊಟ್ಟರೂ ಬೇಸರವಿಲ್ಲ. ಆದರೆ, ಹೈಕಮಾಂಡ್ ಯಾರಿಗೂ ಸಚಿವ ಸ್ಥಾನ ನೀಡದಿರುವುದು ನೋವು ಉಂಟಾಗಿದೆ ಎಂದ್ರು.

ಜಿಲ್ಲೆಯಿಂದ ಒಬ್ಬರಿಗೆ ಸಚಿವ ಸ್ಥಾನ ನೀಡಬೇಕು. ಈ ಬಗ್ಗೆ ಹೈಕಮಾಂಡ್ ಮೇಲೆ ಒತ್ತಡ ಹಾಕಬೇಕಿದೆ. ಮೊದಲ ಹಂತದಲ್ಲಿ ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿಲ್ಲ. ಎರಡನೇ ಹಂತದಲ್ಲಿ ಜಿಲ್ಲೆಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದ್ರು. ಇನ್ನು ಡಿಸಿಎಂ ಲಕ್ಷ್ಮಣ್ ಸವದಿ ಬಗ್ಗೆ ಕೇಳಿದ್ದಕ್ಕೆ ಉತ್ತರಿಸಲಿಲ್ಲ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top